Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:7 - ಕನ್ನಡ ಸಮಕಾಲಿಕ ಅನುವಾದ

7 ಬೋವಜನು ತಿಂದು ಕುಡಿದು ಸಂತುಷ್ಟನಾಗಿದ್ದನು. ಅವನು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿಕೊಂಡನು. ಆಗ ರೂತಳು ಮೆಲ್ಲಗೆ ಬಂದು ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ತೆಗೆದು ಮಲಗಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು, ಕಾಲ್ಬದಿಯಲ್ಲಿ ಮಲಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇತ್ತ ಬೋವಜನು ಅನ್ನಪಾನ ಮಾಡಿ ಸಂತುಷ್ಟನಾಗಿದ್ದನು. ಅನಂತರ ಜವೆಗೋದಿಯ ರಾಶಿಯ ಬಳಿ ಹೋಗಿ ಮಲಗಿಕೊಂಡನು. ರೂತಳು ನಿಶ್ಯಬ್ಧವಾಗಿ ಅವನ ಬಳಿಗೆ ಹೋದಳು. ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ಮೆತ್ತಗೆ ಸರಿಸಿ, ಅಲ್ಲೇ ಮಲಗಿಕೊಂಡಳು. ಸುಮಾರು ನಡುರಾತ್ರಿಯಲ್ಲಿ ಅವನಿಗೆ ತಟ್ಟನೆ ಎಚ್ಚರವಾಯಿತು. ಬಗ್ಗಿ ನೋಡಿದಾಗ ಸ್ತ್ರೀಯೊಬ್ಬಳು ಪಾದಗಳ ಬಳಿ ಮಲಗಿರುವುದನ್ನು ಕಂಡು ಚಕಿತಗೊಂಡು, “ನೀನು ಯಾರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅನ್ನಪಾನಗಳನ್ನು ತೆಗೆದುಕೊಂಡು ಸಂತೃಪ್ತನಾಗಿದ್ದ ಬೋವಜನು ಧಾನ್ಯದ ರಾಶಿಯ ಹತ್ತಿರ ಮಲಗಲು ಹೋದನು. ಆಗ ರೂತಳು ರಹಸ್ಯವಾಗಿ ಬಂದು ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅವನ ಪಾದಗಳ ಬಳಿಯಲ್ಲಿಯೇ ಮಲಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:7
18 ತಿಳಿವುಗಳ ಹೋಲಿಕೆ  

ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.


ಆದ್ದರಿಂದ ಅವರಿಬ್ಬರು ಊಟ ಮಾಡಲು, ಕುಡಿಯಲು ಕುಳಿತುಕೊಂಡರು. ಅನಂತರದಲ್ಲಿ ಆ ಸ್ತ್ರೀಯ ತಂದೆಯು, “ಈ ರಾತ್ರಿ ಇಲ್ಲೇ ಇದ್ದುಕೊಂಡು ಸಂತೋಷಪಡು,” ಎಂದು ಹೇಳಿದನು.


ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.


ಅವನೂ, ಅವನ ಉಪಪತ್ನಿಯೂ ಅವನ ಸೇವಕನೂ ಹೋಗುವುದಕ್ಕೆ ಎದ್ದಾಗ, ಅವನ ಮಾವನು ಅವನಿಗೆ, “ಇಗೋ, ಹೊತ್ತು ಹೋಗಿ ಸಂಜೆ ಆಯಿತು. ಈ ರಾತ್ರಿ ನೀನು ದಯಮಾಡಿ ಇಲ್ಲೇ ಇರು; ಹೊತ್ತು ಮುಣುಗುತ್ತಾ ಬಂತು. ನೀನು ಈ ರಾತ್ರಿ ಇಲ್ಲಿದ್ದು, ನಿನ್ನ ಗುಡಾರಕ್ಕೆ ನಾಳೆ ಬೆಳಿಗ್ಗೆ ಎದ್ದು, ನಿಮ್ಮ ಮಾರ್ಗ ಹಿಡಿದು ಹೋಗಬಹುದು,” ಎಂದನು.


ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಆದುದರಿಂದ ನಾನು ಸಂತೋಷವನ್ನು ಮೆಚ್ಚಿದೆನು. ಏಕೆಂದರೆ ಮನುಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವುದೂ ತಿನ್ನುವುದೂ ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದಿಲ್ಲ. ಸೂರ್ಯನ ಕೆಳಗೆ ದೇವರು ಮನುಷ್ಯನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟಕ್ಕೆ ಸುಖಾನುಭವವು ಅವನಿಗೆ ಸೇರಿರುತ್ತದೆ.


ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.


ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಆಗ ಅವನ ಹೆಂಡತಿ ಈಜೆಬೆಲಳು ಅವನಿಗೆ, “ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೋ? ಎದ್ದು ಊಟಮಾಡು. ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ನಿನಗೆ ಕೊಡಿಸುತ್ತೇನೆ,” ಎಂದಳು.


ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು.


ಅಲ್ಲಿ ಅವರು ಸಂಭ್ರಮವಾಗಿರುವಾಗ, “ನಮ್ಮ ಮುಂದೆ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿರಿ,” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರೆತಂದಾಗ, ಅವನು ಅವರ ಮುಂದೆ ವಿನೋದ ಮಾಡಬೇಕಾಯಿತು. ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.


ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು ಮತ್ತು ಅವರು ಅವನ ಸಂಗಡ ಕುಡಿದು ಸಂತೋಷದಿಂದಿದ್ದರು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದಳು.


ಆದರೆ ಮಧ್ಯರಾತ್ರಿಯಲ್ಲಿ ಬೋವಜನು ಹೆದರಿ ತಿರುಗಿ ನೋಡಿದಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವುದನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು