Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:20 - ಕನ್ನಡ ಸಮಕಾಲಿಕ ಅನುವಾದ

20 ಹೇಗೆಂದರೆ ಕಣ್ಣಿಗೆ ಕಾಣದ ಗುಣಲಕ್ಷಣಗಳಾಗಿರುವ ದೇವರ ಗುಣವೂ ನಿತ್ಯಶಕ್ತಿಯೂ ದೈವಸ್ವಭಾವವೂ ಜಗದ ಸೃಷ್ಟಿ ದಿನದಿಂದ ಅವರು ಸೃಷ್ಟಿಸಿದವುಗಳ ಮೂಲಕ ಸ್ಪಷ್ಟವಾಗಿ ಕಂಡುಬರುತ್ತಿವೆ. ಹೀಗಿರುವುದರಿಂದ ಜನರಿಗೆ ತಪ್ಪಿಸಿಕೊಳ್ಳಲು ನೆಪ ಇಲ್ಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೇಗಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯಶಕ್ತಿಯೂ ದೇವತ್ವವೂ ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತವೆ; ಹೀಗಿರುವದರಿಂದ ಅವರು ಉತ್ತರವಿಲ್ಲದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಡೊಳ್ಯಾಕ್ನಿ ದಿಸಿ ನಸಲ್ಲಿ ತೆಚಿ ಗುನಾ ಮಟ್ಲ್ಯಾರ್, ತೆಚೊ ಕನ್ನಾಚ್ ಸರಿನಸಲ್ಲೊ ಬಳ್ ಅನಿ ದೈವಿಕ್ ಗುನ್, ಹ್ಯೊ ಜಗ್ ರಚಲ್ಲ್ಯಾಕ್ನಾ ಧರುನ್ ತೆನಿ ರಚಲ್ಲ್ಯಾ ಸಗ್ಳ್ಯಾಚ್ಯಾ ವೈನಾ ದಿಸುನ್ ಯೆತ್ಯಾತ್, ತಸೆಮನುನ್ ತ್ಯಾ ಲೊಕಾನಿಕ್ಡೆ ನೆವಾನ್ ಸಾಂಗುಕ್ ಕಾಯ್ಬಿ ನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:20
37 ತಿಳಿವುಗಳ ಹೋಲಿಕೆ  

ದೇವರ ವಿಷಯವಾಗಿ ತಿಳಿಯಬಹುದಾದದ್ದನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. ಏಕೆಂದರೆ ಅದನ್ನು ಅವರಿಗೆ ದೇವರೇ ಪ್ರಕಟಿಸಿದರು.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ. ಇಗೋ, ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ, ಅವುಗಳ ಸೈನ್ಯವನ್ನೆಲ್ಲಾ ಲೆಕ್ಕ ಮಾಡಿ ಹೊರಗೆ ತರುವನು. ಏಕೆಂದರೆ ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ತಪ್ಪದು.


ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡಿದಾಗ,


ಅವರು ತಮ್ಮ ನಡತೆಯಿಂದಲೇ ನಿಯಮವು ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಾಕ್ಷಿಕೊಡುತ್ತದೆ. ಅವರ ಯೋಚನೆಗಳು ಒಂದಕ್ಕೊಂದು ಇದು ತಪ್ಪು ಅಥವಾ ತಪ್ಪಲ್ಲ ಎಂಬುದನ್ನು ಸೂಚಿಸುತ್ತವೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ನಾನು ಬಂದು ಅವರೊಂದಿಗೆ ಮಾತನಾಡದಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರ ಪಾಪದ ವಿಷಯವಾಗಿ ಅವರಿಗೆ ನೆಪವಿಲ್ಲ.


ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ.


ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ; ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.


ನಿಮ್ಮ ನಂಬಿಗಸ್ತಿಕೆಯು ಎಲ್ಲಾ ತಲೆಮಾರಿಗೂ ಮುಂದುವರಿಯುವುದು; ನೀವು ಸ್ಥಾಪಿಸಿದ ಭೂಮಿಯು ನೆಲೆಯಾಗಿರುವುದು.


ಯುಗಯುಗಾಂತರಗಳಿಗೂ ಅದು ಕದಲದ ಹಾಗೆ, ದೇವರು ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಸ್ಥಾಪಿಸಿದ್ದಾರೆ.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.


ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.


ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.


ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.


ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಯೆಹೋವ ದೇವರ ಮಹಿಮೆಯು ಯುಗಯುಗಕ್ಕೂ ಇರಲಿ; ಯೆಹೋವ ದೇವರು ತಮ್ಮ ಕೆಲಸಗಳಲ್ಲಿ ಸಂತೋಷಪಡಲಿ.


ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.


ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ.


“ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು.


ಬೆಟ್ಟಗಳು ಹುಟ್ಟುವುದಕ್ಕಿಂತ ಮುಂಚೆಯೂ ನೀವು ಲೋಕವನ್ನೂ ನಿರ್ಮಿಸುವುದಕ್ಕಿಂತ ಮುಂಚೆಯೂ ಯುಗಯುಗಾಂತರಕ್ಕೂ ನೀವು ದೇವರಾಗಿದ್ದೀರಿ.


ನಿತ್ಯ ದೇವರು ನಿನ್ನ ಆಶ್ರಯವು. ದೇವರ ಶಾಶ್ವತ ತೋಳುಗಳು ನಿನಗೆ ಆಶ್ರಯ. ನಿನ್ನ ವೈರಿಗಳನ್ನು ನಿನ್ನ ಮುಂದೆ ಓಡಿಸಿ, ‘ಅವರನ್ನು ಸಂಹರಿಸಿರಿ,’ ಎಂದು ಆಜ್ಞಾಪಿಸುವರು.


ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.


ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು, ಅಲ್ಲಿ ನಿತ್ಯ ದೇವರಾಗಿರುವ ಯೆಹೋವ ದೇವರ ಹೆಸರನ್ನು ಹೇಳಿ ಆರಾಧಿಸಿದನು.


“ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು.


“ಆದರೂ ಮೃಗಗಳನ್ನು ಕೇಳು, ಅವು ನಿನಗೆ ಬೋಧಿಸುವುವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವುವು.


“ಅವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.


ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.’


ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು