Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:25 - ಕನ್ನಡ ಸಮಕಾಲಿಕ ಅನುವಾದ

25 ಅವರು ದೇವರ ಸತ್ಯವನ್ನು ಸುಳ್ಳನ್ನಾಗಿ ಬದಲಿಸಿಕೊಂಡು, ಸೃಷ್ಟಿಕರ್ತನನ್ನು ಆರಾಧಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವೆ ಸಲ್ಲಿಸುವವರಾದರು. ಸೃಷ್ಟಿ ಕರ್ತನೇ ನಿರಂತರವಾಗಿ ಸ್ತುತಿ ಹೊಂದತಕ್ಕವರು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ದೇವರ ಸತ್ಯವನ್ನು ಬಿಟ್ಟು ಅಸತ್ಯವಾದುದನ್ನು ಅಂಗೀಕರಿಸಿದರು; ಸೃಷ್ಟಿಕರ್ತನನ್ನು ಆರಾಧಿಸದೆ, ಸೃಷ್ಟಿಯಾದ ವಸ್ತುಗಳನ್ನೇ ಆರಾಧಿಸಿ, ಸೇವೆಸಲ್ಲಿಸಿದರು. ಸರ್ವಕಾಲಕ್ಕೂ ಸೃಷ್ಟಿಕರ್ತರೊಬ್ಬರಿಗೇ ಸ್ತುತಿಸ್ತೋತ್ರ ಸಲ್ಲತಕ್ಕದ್ದು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಸತ್ಯದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿಕರ್ತನನ್ನು ಪೂಜಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವಿಸುವವರಾದರು. ಸೃಷ್ಟಿಕರ್ತನೊಬ್ಬನೇ ನಿರಂತರ ಸ್ತುತಿಹೊಂದತಕ್ಕವನು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವರು ದೇವರ ಸತ್ಯವನ್ನು ತೊರೆದು ಸುಳ್ಳನ್ನು ಹಿಡಿದುಕೊಂಡರು; ಸೃಷ್ಟಿಸಲ್ಪಟ್ಟ ವಸ್ತುಗಳನ್ನು ಆರಾಧಿಸಿದರು; ಅವುಗಳ ಸೇವೆ ಮಾಡಿದರು. ಆದರೆ ಆ ವಸ್ತುಗಳನ್ನು ಸೃಷ್ಟಿಸಿದ ದೇವರನ್ನು ಅವರು ಆರಾಧಿಸಲಿಲ್ಲ; ಆತನ ಸೇವೆ ಮಾಡಲಿಲ್ಲ. ದೇವರಿಗೇ ನಿರಂತರ ಸ್ತುತಿಸ್ತೋತ್ರ ಸಲ್ಲಬೇಕು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆನಿ ದೆವಾಚ್ಯಾ ವಿಶಯಾತ್ ಹೊತ್ತೆ ಖರೆ, ಎಕ್ ಝುಟೆ ಕರುನ್ ಬದಲ್ಲ್ಯಾನಾತ್; ದೆವಾನ್ ರಚಲ್ಲ್ಯಾ ರಚ್ನೆಂಚಿ ತೆನಿ ಸೆವಾ ಅನಿ ಆರಾದನ್ ಕರ್‍ತ್ಯಾತ್, ಸಗ್ಳೆ ರಚಲ್ಲ್ಯಾ ದೆವಾಕುಚ್ ತೆನಿ ಸೊಡುನ್ ಸೊಡ್ಲ್ಯಾನಾತ್, ತ್ಯಾ ದೆವಾಕ್ ಸ್ತುತಿ ಹೊವ್ಕ್ ಪಾಜೆ ಸದಾ ಸರ್ವತಾಕ್! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:25
22 ತಿಳಿವುಗಳ ಹೋಲಿಕೆ  

“ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ.


ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.


ನಮ್ಮ ಕರ್ತ ಯೇಸುವಿನ ದೇವರೂ ತಂದೆಯೂ ನಾನು ಸುಳ್ಳು ಹೇಳುವುದಿಲ್ಲ ಎಂಬುದನ್ನು ಬಲ್ಲವರಾಗಿದ್ದಾರೆ. ಅವರಿಗೇ ನಿತ್ಯವೂ ಸ್ತುತಿ ಸಲ್ಲಲಿ.


ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಶು, ಪಕ್ಷಿ, ಸರ್ಪಾದಿಗಳ ಮೂರ್ತಿಗಳೊಂದಿಗೆ ಬದಲಿಸಿಕೊಂಡರು.


ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ


ದುಷ್ಟತನದಿಂದ ಸತ್ಯವನ್ನು ಅಡಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆ ಹಾಗೂ ದುಷ್ಟತನದ ಮೇಲೆ ದೇವರ ರೌದ್ರವು ಪರಲೋಕದಿಂದ ಪ್ರಕಟವಾಗುತ್ತಿದೆ.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


ಈ ಬೋಧನೆಯು ಭಾಗ್ಯವಂತರಾದ ದೇವರ ಮಹಿಮೆಯ ಸುವಾರ್ತೆಗೆ ಅನುರೂಪವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲಾಗಿದೆ.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್.


ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.


ಅನಂತರ ಯೇಸು ಅವರಿಗೆ, “ಈಗ ಇದನ್ನು ತೆಗೆದುಕೊಂಡು ಔತಣದ ಮೇಲ್ವಿಚಾರಕನಿಗೆ ಕೊಡಿರಿ,” ಎಂದರು. ಸೇವಕರು ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು