Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:28 - ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಕಶ್ಯಾಕ್ ಮಟ್ಲ್ಯಾರ್, ತ್ಯಾ ಲೊಕಾನಿ ದೆವಾಚ್ಯಾ ವಿಶಯಾತ್ ಹೊತ್ತಿ ಖರಿ ಬುದ್ದ್ ಅಪ್ನಾಂಚ್ಯಾ ಮನಾತ್ನಿ ಥವ್ನ್ ಘೆವ್ಕ್ ಇನ್ಕಾರ್ ಕರ್‍ಲ್ಯಾನಾತ್, ದೆವಾನ್ ತೆಂಕಾ ತೆಂಚ್ಯಾ ಪೊಜ್ಡ್ಯಾ ಚಾಲಿಚ್ಯಾ ತಾಬೆತ್ ಸೊಡುನ್ ಸೊಡ್ಲ್ಯಾನಾಯ್. ತಸೆಮನುನ್ ತೆನಿ ನಕ್ಕೊ ಹೊಲ್ಲಿ ಬುರ್ಶಿ ಕಾಮಾ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:28
33 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಇದೆ. ಮೋಸದಿಂದಲೇ ನನ್ನನ್ನು ನಿರಾಕರಿಸುತ್ತಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದಕಾರಣ ಅವರು ತಮ್ಮ ಹೃದಯದ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಲಿನ ಮಾಡಿಕೊಳ್ಳಲಿ ಎಂದು ದೇವರು ಅವರನ್ನು ಅಶುದ್ಧತೆಗೆ ಒಪ್ಪಿಸಿಬಿಟ್ಟರು.


ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.


ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವುದು; ಏಕೆಂದರೆ, ಯೆಹೋವ ದೇವರು ಅವರನ್ನು ತಳ್ಳಿದ್ದಾರೆ.”


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಏಕೆಂದರೆ ಅವರು ಅರಿವನ್ನು ಹಗೆಮಾಡಿ, ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು.


“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.


ಸ್ವಸ್ಥಚಿತ್ತರಾಗಿರಿ, ಪಾಪಮಾಡುವುದನ್ನು ನಿಲ್ಲಿಸಿರಿ. ಕೆಲವರಂತೂ ದೇವರನ್ನೇ ಅಲಕ್ಷ್ಯಮಾಡುವವರಾಗಿದ್ದಾರೆ. ನಿಮಗೆ ನಾಚಿಕೆಯಾಗಬೇಕೆಂದು ನಾನು ಇದನ್ನು ಹೇಳುತ್ತೇನೆ.


ದುಷ್ಟತನದಿಂದ ಸತ್ಯವನ್ನು ಅಡಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆ ಹಾಗೂ ದುಷ್ಟತನದ ಮೇಲೆ ದೇವರ ರೌದ್ರವು ಪರಲೋಕದಿಂದ ಪ್ರಕಟವಾಗುತ್ತಿದೆ.


“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ಅಶ್ಲೀಲತೆ, ಬುದ್ಧಿಹೀನ ಮಾತು, ಅಸಭ್ಯ ಹರಟೆ ಇವು ಬೇಡ, ಇವು ಅಯುಕ್ತವಾಗಿವೆ, ಪ್ರತಿಯಾಗಿ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.


ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗೆ ಒಪ್ಪಿಸಿಬಿಟ್ಟರು. ಹೇಗೆಂದರೆ ಅವರ ಸ್ತ್ರೀಯರು ಸಹ ಸ್ವಾಭಾವಿಕವಾದ ಭೋಗವನ್ನು ಬಿಟ್ಟು, ಅಸ್ವಾಭಾವಿಕವಾದದ್ದನ್ನು ಅನುಸರಿಸಿದರು.


ಜ್ಞಾನವನ್ನು ಸಂಪಾದಿಸುವುದಕ್ಕೆ ಬುದ್ಧಿಹೀನನ ಕೈಯಲ್ಲಿ ಹಣ ಏಕೆ? ಅವನಿಗೆ ಕಲಿಯಲು ಮನಸ್ಸಿಲ್ಲವಲ್ಲ.


ಆದರೆ ಪೂರ್ವಕಾಲದಲ್ಲಿ ದೇವರ ವಾಕ್ಯದಿಂದ ಆಕಾಶವು ಅಸ್ತಿತ್ವಕ್ಕೆ ಬಂದಿತು ಎಂತಲೂ ಜಲದಿಂದ ಜಲದ ಮೂಲಕ ಭೂಮಿಯು ಉಂಟಾಯಿತೆಂಬುದನ್ನು ಅವರು ಬೇಕೆಂತಲೇ ಮರೆತುಬಿಡುತ್ತಾರೆ.


ಆದಕಾರಣ, ನಾನು ಈಗ ನಿನಗೆ ಏನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಬಹು ಧೈರ್ಯವಿದ್ದರೂ


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.


ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ.


ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.


ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ, ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.


ಅಪರಾಧದ ಮೇಲೆ ಅಪರಾಧವು ಅವರ ಮೇಲೆ ಬರಲಿ. ಅವರು ನಿಮ್ಮ ರಕ್ಷಣೆಯಲ್ಲಿ ಸೇರದೆ ಇರಲಿ.


ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ, ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.


ತಮ್ಮ ವಿಗ್ರಹಗಳಿಗಾಗಿ ನನ್ನನ್ನು ತೊರೆದ ಇಸ್ರಾಯೇಲ್ ಜನರ ಹೃದಯಗಳನ್ನು ಪುನಃ ವಶಪಡಿಸಿಕೊಳ್ಳಲು ನಾನು ಇದನ್ನು ಮಾಡುತ್ತೇನೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು