Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:12 - ಕನ್ನಡ ಸಮಕಾಲಿಕ ಅನುವಾದ

12 ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈ ವಿಷಯದಲ್ಲಿ ಯೆಹೂದ್ಯನಿಗೂ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತ; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಸಗ್ಳ್ಯಾಂಚ್ಯಾ ವಿಶಯಾತ್‍ಬಿ ಸಾಂಗಲ್ಲೆ ಹಾಯ್ ಕಶ್ಯಾಕ್ ಮಟ್ಲ್ಯಾರ್, ಹ್ಯಾತುರ್ ಜುದೆವ್ ಅನಿ ಜುದೆವ್ ನ್ಹಯ್ ಹೊತ್ತೊ ಮನ್ತಲೊ ಭೆದ್ ನಾ, ದೆವ್ ಸಗ್ಳ್ಯಾಕ್ನಿಬಿ ಎಕುಚ್ ನಮುನ್ಯಾಚೊ ಧನಿ ಅನಿ ಜೆ ಕೊನ್ ತೆಕಾ ಬಲ್ವುತ್ಯಾತ್ ತೆಂಕಾ ತೊ ಭರ್ಪುರ್ ಆಶಿರ್ವಾದಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:12
33 ತಿಳಿವುಗಳ ಹೋಲಿಕೆ  

ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ, ಅವರು ಅವರಿಗೆ ಸಮೀಪವಾಗಿದ್ದಾರೆ.


ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.


ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.


ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.


ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ?


ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.


ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಮೊದಲನೆಯ ಮನುಷ್ಯ, ಭೂಮಿಯ ಮಣ್ಣಿನವನಾಗಿದ್ದಾನೆ, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾರೆ.


ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು.


ಪುನಃ ಪ್ರವಾದಿ ಯೆಶಾಯನು ಹೇಳುವುದೇನೆಂದರೆ: “ಇಷಯನ ವಂಶದಿಂದ ಬೇರು ಒಂದು ಚಿಗುರುವುದು, ಜನಾಂಗಗಳನ್ನು ಆಳುವವರಾಗಿ ಅವರು ಉದಯಿಸುವರು. ಯೆಹೂದ್ಯರಲ್ಲದವರು ಆತನಲ್ಲಿ ನಿರೀಕ್ಷೆ ಇಡುವರು.”


ಇಲ್ಲಿ ನಿಮ್ಮ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕನಿಂದ ಅಧಿಕಾರದ ಪತ್ರ ಪಡೆದು ಬಂದಿದ್ದಾನೆ,” ಎಂದು ಉತ್ತರಕೊಟ್ಟನು.


ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು