Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಭುವಿನಲ್ಲಿ ವಿಶ್ವಾಸವಿಲ್ಲದಿದ್ದರೆ ಅವರ ನಾಮಸ್ಮರಣೆ ಮಾಡುವುದಾದರೂ ಹೇಗೆ? ಅವರ ವಿಷಯವನ್ನು ಕುರಿತು ಕೇಳದಿದ್ದರೆ ಅವರನ್ನು ವಿಶ್ವಾಸಿಸುವುದಾದರೂ ಹೇಗೆ? ಬೋಧಿಸುವವರು ಇಲ್ಲದಿದ್ದರೆ ಅವರ ವಿಷಯವನ್ನು ಕುರಿತು ಕೇಳುವುದಾದರೂ ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ತಾವು ಯಾವನನ್ನು ನಂಬಲಿಲ್ಲವೋ ಆತನ ನಾಮವನ್ನು ಹೇಳಿಕೊಳ್ಳುವದು ಹೇಗೆ? ಮತ್ತು ಆತನ ಸುದ್ದಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಸಾರುವವರು ಕಳುಹಿಸಲ್ಪಡದೆ ಸಾರುವದೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ತೆನಿ ತೆಚ್ಯಾ ವರ್‍ತಿ ವಿಶ್ವಾಸುಚ್ ಕರಲ್ಲೊ ನಸ್ಲ್ಯಾರ್ ಮಜತ್ ಕರುಕ್ ಕಶೆ ಬಲ್ವುಕ್ ಹೊತಾ? ಅನಿ ತೆನಿ ದೆವಾಚಿ ಬಾತ್ಮಿಚ್ ಆಯ್ಕಲ್ಲಿ ನಸ್ಲ್ಯಾರ್ ವಿಶ್ವಾಸ್ ತರ್ ಕಶೆ ಕರುಕ್ ಹೊತಾ? ಬಾತ್ಮಿಚ್ ಸಾಂಗುನ್ ಹೊಲ್ಲಿ ನಸ್ಲ್ಯಾರ್ ತೆನಿ ಆಯಿಕ್ತಲೆ ಕಶೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:14
22 ತಿಳಿವುಗಳ ಹೋಲಿಕೆ  

ತಮ್ಮ ವಾಕ್ಯ ಸಾರುವುದರ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕರಾದ ದೇವರ ಆಜ್ಞೆಗನುಸಾರವಾಗಿ ನನಗೆ ಒಪ್ಪಿಸಿದರು.


ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.


ಅವನು, “ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?” ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ನೀವು ಕ್ರಿಸ್ತನ ಬಗ್ಗೆ ಕೇಳಿ ಬೋಧನೆಯನ್ನು ಪಡೆದಾಗ, ಅದು ಯೇಸುವಿನಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತು.


ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.


“ನೀವು ವಿಶ್ವಾಸವನ್ನಿಟ್ಟಾಗ ಪವಿತ್ರಾತ್ಮರನ್ನು ಪಡೆದುಕೊಂಡಿರೋ?” ಎಂದು ಪ್ರಶ್ನೆ ಮಾಡಿದನು. ಅದಕ್ಕೆ ಅವರು, “ಇಲ್ಲ, ಪವಿತ್ರಾತ್ಮ ಇದ್ದಾರೆಂಬುದನ್ನು ನಾವು ಕೇಳಿಯೇ ಇಲ್ಲ,” ಎಂದರು.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಆಗ ಆ ಜನರು, ಯೆಹೋವ ದೇವರಿಗೆ ಬಹಳವಾಗಿ ಭಯಪಟ್ಟು, ಅವರಿಗೆ ಬಲಿ ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.


ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ, ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸರಕುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಇಳಿದು ಹೋಗಿ, ಮಲಗಿಕೊಂಡು ಗಾಢ ನಿದ್ರೆಯಲ್ಲಿದ್ದನು.


ಅದಕ್ಕೆ ಅವನು, “ಸ್ವಾಮೀ, ನಾನು ಅವರನ್ನು ನಂಬುವಂತೆ ಅವರು ಯಾರೆಂದು ತಿಳಿಸಿರಿ,” ಎಂದನು.


ಇದಲ್ಲದೆ ಕ್ರಿಸ್ತ ಯೇಸುವು ಬಂದು ದೂರವಾಗಿದ್ದ ನಿಮಗೂ ಸಮೀಪವಾಗಿದ್ದ ನಮಗೂ ಸಮಾಧಾನವನ್ನು ಸಾರಿದರು.


“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಸಮುದ್ರವನ್ನು ದಾಟಿ, ನಮಗೆ ತೆಗೆದುಕೊಂಡು ಬಂದು ಅದನ್ನು ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಸಮುದ್ರದ ಆಚೆಯಲ್ಲಿ ಇರುವಂಥದ್ದೂ ಅಲ್ಲ.


“ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು