Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೆಶಾಯನು ಮತ್ತಷ್ಟು ದಿಟ್ಟತನದಿಂದ ಈ ರೀತಿ ಹೇಳಿದ್ದಾನೆ: “ನನ್ನನ್ನು ಅರಸದವರಿಗೂ ನಾನು ಕಾಣಿಸಿಕೊಂಡೆ ನನ್ನ ಬಗ್ಗೆ ವಿಚಾರಿಸದವರಿಗೂ ನಾನು ಪ್ರತ್ಯಕ್ಷನಾದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತಾಡಿ - ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ವಿಷಯ ವಿಚಾರಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಇಸಾಯಿಯಾ ಅನಿ ಉಲ್ಲೆ ಬರೆ ಕರುನ್ ಸಾಂಗ್ತಾ, ಕೊನ್ ಮಾಜಿ ವಾಟ್ ರಾಕುನ್ಗೆತ್ ನತ್ತೆ, ತೆಂಕಾ ಮಿಯಾ ಗಾವ್ಲೊ; ಜೆ ಕೊನ್ ಮಾಜ್ಯಾ ವಿಶಯಾತ್ ಇಚಾರಿನಸಿತ್ ತೆಂಕಾ ಮಿಯಾ ದಿಸ್ಲೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:20
14 ತಿಳಿವುಗಳ ಹೋಲಿಕೆ  

ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


“ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು.


“ಹೀಗೆ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.


ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.


ಆದರೆ ನೀತಿಯ ನಿಯಮವನ್ನು ಅನುಸರಿಸಿದ ಇಸ್ರಾಯೇಲರಾದರೋ ಆ ನೀತಿಯ ಮಾರ್ಗವನ್ನು ಪಡೆಯಲಿಲ್ಲ.


ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು