Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:9 - ಕನ್ನಡ ಸಮಕಾಲಿಕ ಅನುವಾದ

9 ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಯೇಸುಸ್ವಾಮಿಯೇ ಪ್ರಭು” ಎಂದು ನೀನು ಬಾಯಿಂದ ನಿವೇದಿಸಿ, ಅವರನ್ನು ದೇವರು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದೇನಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಯೇಸುವೇ ಪ್ರಭು”ವೆಂದು ನಿನ್ನ ಬಾಯಿಯ ಮೂಲಕ ಹೇಳುವುದಾದರೆ ಮತ್ತು ಯೇಸುವನ್ನು ಸತ್ತವರೊಳಗಿಂದ ಜೀವಂತನಾಗಿ ಎಬ್ಬಿಸಿದವನು ದೇವರೇ ಎಂದು ನಿನ್ನ ಹೃದಯದಲ್ಲಿ ನಂಬುವುದಾದರೆ, ನೀನು ರಕ್ಷಣೆ ಹೊಂದುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮಿ ಜೆಜುಚ್ ಧನಿ ಅನಿ ದೆವಾನ್ ತೆಕಾ ಝಿತ್ತೊ ಕರುನ್ ಉಟ್ವುಲ್ಯಾನಾಯ್ ಮನುನ್ ಸಮ್ಜುನ್ ಘೆಟಲ್ಯಾಶಿ ತರ್ ಬಚಾವ್ ಹೊತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:9
22 ತಿಳಿವುಗಳ ಹೋಲಿಕೆ  

“ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು.


“ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು,” ಎಂದರು.


ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.


ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಜೀವಿಸುವುದರಿಂದ, ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’ ಎಂದು ಕರ್ತನು ಹೇಳುತ್ತಾರೆ.”


ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ: ದೇವರಾತ್ಮರಿಂದ ಮಾತನಾಡುವ ಯಾವನೂ, “ಯೇಸು ಶಾಪಗ್ರಸ್ತನು,” ಎಂದು ಹೇಳುವುದಿಲ್ಲ. ಪವಿತ್ರಾತ್ಮರಿಂದಲೇ ಹೊರತು, ಯಾವನೂ, “ಯೇಸು ಕರ್ತದೇವರು,” ಎಂದು ಹೇಳಲಾರನು.


ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.


ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.


ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.


ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.


ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.


ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು.


ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.


ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.


ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು