Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:1 - ಕನ್ನಡ ಸಮಕಾಲಿಕ ಅನುವಾದ

1 ಹಾಗಾದರೆ, ದೇವರು ತಮ್ಮ ಜನರನ್ನು ತ್ಯಜಿಸಿಬಿಟ್ಟಿದ್ದಾರೋ ಎಂದು ಕೇಳುತ್ತೇನೆ? ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲನೂ ಅಬ್ರಹಾಮನ ವಂಶದವನೂ ಬೆನ್ಯಾಮೀನನ ಕುಲದವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಾಗಾದರೆ ದೇವರು ತಮ್ಮ ಜನರಾದ ಇಸ್ರಯೇಲರನ್ನು ತಿರಸ್ಕರಿಸಿದ್ದಾರೆ ಎಂದು ಹೇಳೋಣವೆ? ಎಂದಿಗೂ ಇಲ್ಲ. ನಾನು ಸಹ ಇಸ್ರಯೇಲನು, ಅಬ್ರಹಾಮನ ಸಂತತಿಯವನು; ಬೆನ್ಯಮೀನ್ ಮನೆತನಕ್ಕೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಾಗಾದರೆ ದೇವರು ತನ್ನ ಪ್ರಜೆಯನ್ನು ಬೇಡವೆಂದು ತಳ್ಳಿಬಿಟ್ಟದ್ದುಂಟೇ ಎಂದು ಕೇಳುತ್ತೇನೆ. ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹಾಗಾದರೆ, “ದೇವರು ತನ್ನ ಜನರನ್ನು ತಿರಸ್ಕರಿಸಿದನೇ?” ಎಂದು ನಾನು ಕೇಳುತ್ತೇನೆ. ಇಲ್ಲ! ನಾನೂ ಒಬ್ಬ ಇಸ್ರೇಲನಾಗಿದ್ದೇನೆ. ನಾನು ಅಬ್ರಹಾಮನ ಕುಟುಂಬಕ್ಕೆ ಸೇರಿದವನಾಗಿದ್ದೇನೆ: ಬೆನ್ಯಾಮೀನನ ಕುಲದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಜಾಲ್ಯಾರ್ ಮಿಯಾ ಇಚಾರ್ತಾ: ದೆವಾನ್ ಅಪ್ನಾಚ್ಯಾ ಲೊಕಾಂಚೊ ತಿರಸ್ಕಾರ್ ಕರ್‍ಲ್ಯಾನ್ ಕಾಯ್? ಕನ್ನಾಚ್ ನಾ! ಮಿಯಾ ಸ್ವತಾಚ್ ಎಕ್ ಇಸ್ರಾಯೆಲಾಚೊ, ಮಾನುಸ್, ಅಬ್ರಾಹಾಮಾಚ್ಯಾ ಘರಾನ್ಯಾಚೊ ಮಾನುಸ್ ಬೆಂಜಾಮಿನಾಚ್ಯಾ ಕುಳಿಚೊ ಮಾನುಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:1
17 ತಿಳಿವುಗಳ ಹೋಲಿಕೆ  

ಅವರು ಹೀಬ್ರಿಯರೋ? ನಾನೂ ಹೀಬ್ರಿಯನೇ. ಅವರು ಇಸ್ರಾಯೇಲರೋ? ನಾನೂ ಇಸ್ರಾಯೇಲನೇ. ಅವರು ಅಬ್ರಹಾಮನ ಸಂತತಿಯವರೋ? ನಾನೂ ಕೂಡಾ ಅಬ್ರಹಾಮನ ಸಂತತಿಯೇ.


ಏಕೆಂದರೆ ಯೆಹೋವ ದೇವರು ತಮ್ಮ ಮಹತ್ತಾದ ಹೆಸರಿಗೋಸ್ಕರ ತಮ್ಮ ಜನರನ್ನು ಕೈಬಿಡುವುದಿಲ್ಲ. ನಿಮ್ಮನ್ನು ತಮ್ಮ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾರಲ್ಲಾ?


ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು; ಬೆನ್ಯಾಮೀನನ ಕುಲದವನು; ಹೀಬ್ರಿಯರಿಂದ ಹುಟ್ಟಿದ ಹೀಬ್ರಿಯನು; ಮೋಶೆಯ ನಿಯಮದ ಅನುಸಾರವಾಗಿ ನಾನು ಫರಿಸಾಯನು.


“ನಾನು ಬಾಲಕನಾಗಿದ್ದಾಗಿನಿಂದ, ನನ್ನ ಪಟ್ಟಣದಲ್ಲಿಯೂ ಅನಂತರ ಯೆರೂಸಲೇಮಿನಲ್ಲಿಯೂ ನಾನು ಜೀವನ ಮಾಡಿದ ರೀತಿಯನ್ನು ಯೆಹೂದ್ಯರೆಲ್ಲರೂ ಬಲ್ಲವರಾಗಿದ್ದಾರೆ.


“ನಾನು ಕಿಲಿಕ್ಯದ ತಾರ್ಸದಲ್ಲಿ ಜನಿಸಿದ ಯೆಹೂದ್ಯನು, ಈ ಪಟ್ಟಣದಲ್ಲಿಯೇ ಬೆಳೆದವನು, ಗಮಲಿಯೇಲನ ಪಾದ ಸನ್ನಿಧಿಯಲ್ಲಿ ನಮ್ಮ ಪಿತೃಗಳ ನಿಯಮವನ್ನು ಸೂಕ್ಷ್ಮವಾಗಿ ಅಭ್ಯಾಸ ಮಾಡಿದೆ. ದೇವರ ವಿಷಯದಲ್ಲಿ, ಇಂದು ನೀವೆಲ್ಲರೂ ಇರುವಂತೆಯೇ ನಾನೂ ಆಸಕ್ತಿವುಳ್ಳವನಾಗಿದ್ದೆನು.


ನನ್ನ ದೇವರು ಅವರನ್ನು ತಳ್ಳಿಬಿಡುವರು. ಏಕೆಂದರೆ ಅವರು ಆತನಿಗೆ ವಿಧೇಯರಾಗಲಿಲ್ಲ. ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.


ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.”


ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.


“ನಿರಂತರವಾಗಿ ಯೆಹೋವ ದೇವರು ತಳ್ಳಿಬಿಡುವರೋ? ಇನ್ನೆಂದಿಗೂ ದಯೆತೋರದೆ ಇರುವರೋ?


ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.


ಇಸ್ರಾಯೇಲರು ಏಳಲಾರದ ಹಾಗೇ ಎಡವಿದರೋ? ಎಂದು ನಾನು ಕೇಳುತ್ತೇನೆ. ಇಲ್ಲವೇ ಇಲ್ಲ! ಆದರೆ, ಇಸ್ರಾಯೇಲರಲ್ಲಿ ಮತ್ಸರ ಉಂಟಾಗುವಂತೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆಯು ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು