Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:14 - ಕನ್ನಡ ಸಮಕಾಲಿಕ ಅನುವಾದ

14 ಹೇಗೂ ನಾನು ನನ್ನ ಸ್ವಂತ ಜನರಾದ ಯೆಹೂದ್ಯರಲ್ಲಿ ಮತ್ಸರವನ್ನು ಉದ್ರೇಕಿಸಿ ಅವರಲ್ಲಿ ಕೆಲವರನ್ನಾದರೂ ರಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೂ ಈ ಸೇವೆಯ ಮೂಲಕ ನನ್ನ ಸ್ವಜನರಲ್ಲಿ ಪ್ರೇಮಾಸೂಯೆಯನ್ನು ಮೂಡಿಸಿ ಅವರಲ್ಲಿ ಬಹುಶಃ ಕೆಲವರನ್ನಾದರೂ ಉದ್ಧಾರದ ಮಾರ್ಗಕ್ಕೆ ತರಲು ಸಾಧ್ಯವಾದೀತೆಂದು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗೆ ಒಂದು ವೇಳೆ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಸಹ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನನ್ನ ಸ್ವಂತ ಜನರಲ್ಲಿ (ಯೆಹೂದ್ಯರಲ್ಲಿ) ಅಸೂಯೆಯನ್ನು ಉಂಟುಮಾಡಿ ಅವರಲ್ಲಿ ಕೆಲವರಾದರೂ ರಕ್ಷಣೆ ಹೊಂದುವಂತೆ ಮಾಡಬಲ್ಲೆನೆಂಬ ನಿರೀಕ್ಷೆ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹೆಚ್ಯಾ ವೈನಾ ಮಿಯಾ ಮಾಜ್ಯಾ ಸ್ವತಾಚ್ಯಾ ಕುಳಿಚ್ಯಾ ಲೊಕಾಂಚ್ಯಾ ಪೊಟಾತ್ನಿ ಝಳ್ ಪಡಿಸರ್ಕೆ ಕರ್‍ತಾ, ಅನಿ ಅಶೆ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಹುರ್‍ವುನ್ ಘೆವ್ಕ್ ಮಾಜ್ಯಾನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:14
19 ತಿಳಿವುಗಳ ಹೋಲಿಕೆ  

ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವೆಯೋ ಏನೋ ನಿನಗೇನು ಗೊತ್ತು?


ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.


ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.


ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.


ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ಇಸ್ರಾಯೇಲರು ಏಳಲಾರದ ಹಾಗೇ ಎಡವಿದರೋ? ಎಂದು ನಾನು ಕೇಳುತ್ತೇನೆ. ಇಲ್ಲವೇ ಇಲ್ಲ! ಆದರೆ, ಇಸ್ರಾಯೇಲರಲ್ಲಿ ಮತ್ಸರ ಉಂಟಾಗುವಂತೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆಯು ಉಂಟಾಯಿತು.


ಅವನು ಆ ಪಾಪ ಮಾಡಿದವನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ, ಅವನ ಆತ್ಮವನ್ನು ಮರಣದಿಂದಲೂ ತಪ್ಪಿಸಿ, ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲಿ.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ನನಗೆ ಪ್ರಾಣವಾಗಿರುವ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ನಾನು ಕಳುಹಿಸಿ ಕೊಡುತ್ತಿದ್ದೇನೆ.


ಆಗ ಲಾಬಾನನು ಅವನಿಗೆ, “ನಿಶ್ಚಯವಾಗಿ ನೀನು ನನ್ನ ರಕ್ತಸಂಬಂಧಿಯಾಗಿದ್ದೀ,” ಎಂದನು. ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.


ನೀವು ನನ್ನ ಸಹೋದರರೂ, ನನ್ನ ರಕ್ತವೂ, ನನ್ನ ಮಾಂಸವೂ ಆಗಿದ್ದೀರಿ. ಹಾಗಾದರೆ ಅರಸನನ್ನು ತಿರುಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?’ ಎಂದು ತಿಳಿಸಿರಿ.


ಆದರೆ ಇಸ್ರಾಯೇಲರಿಗೆ ಅರ್ಥವಾಗಲಿಲ್ಲವೇ? ಎಂದು ನಾನು ಪ್ರಶ್ನಿಸುತ್ತೇನೆ. ಮೊದಲನೆಯದಾಗಿ ಮೋಶೆಯು, “ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ತಿಳುವಳಿಕೆಯಿಲ್ಲದ ಜನಾಂಗದವರ ಮೂಲಕ ನೀವು ಕೋಪಗೊಳ್ಳುವಂತೆ ಮಾಡುವೆನು,” ಎಂದು ಹೇಳುತ್ತಾನೆ.


ನಾನಂತೂ ಎಲ್ಲರನ್ನೂ, ಎಲ್ಲದರಲ್ಲೂ ಮೆಚ್ಚಿಸಲು ಶ್ರಮಿಸುವವನಾಗಿದ್ದೇನೆ. ಏಕೆಂದರೆ, ನಾನು ನನ್ನ ಸ್ವಂತ ಹಿತವನ್ನೇ ಹುಡುಕದೆ, ಅನೇಕರು ರಕ್ಷಣೆ ಹೊಂದಬೇಕೆಂದು ಇತರರ ಹಿತಕ್ಕಾಗಿ ಶ್ರಮಿಸುವವನಾಗಿದ್ದೇನೆ.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು