Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:13 - ಕನ್ನಡ ಸಮಕಾಲಿಕ ಅನುವಾದ

13 ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಗರ್ಜೆತ್ ಅಸಲ್ಲ್ಯಾ ತುಮ್ಚ್ಯಾ ಭಾವಾ ಭೆನಿಯಾಕ್ನಿ ಮಜತ್ ಕರಾ, ಅನಿ ವಳಕನಸಲ್ಲ್ಯಾ ತುಮ್ಚ್ಯಾ ಘರಾಕ್ನಿ ಯೆತಲ್ಯಾಕ್ನಿ ಮಾನ್ ದಿವಾ, ತೆಂಚಿ ಚಾಕ್ರಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:13
30 ತಿಳಿವುಗಳ ಹೋಲಿಕೆ  

ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ.


ಈ ನಿಮ್ಮ ಸೇವೆಯು ಬರೀ ದೇವಜನರ ಕೊರತೆಯನ್ನು ನೀಗಿಸುವುದು ಮಾತ್ರವಲ್ಲ, ಅನೇಕರು ದೇವರಿಗೆ ತುಂಬಿ ಹರಿಯುವಷ್ಟು ಕೃತಜ್ಞತಾಸ್ತುತಿ ಸಲ್ಲಿಸುವಂತೆ ಮಾಡುವುದು.


ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?


ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.


ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.


ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಟ್ಟಿರಿ.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಉತ್ತೇಜನವಾದ್ದರಿಂದ, ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಆನಂದವೂ ಆದರಣೆಯೂ ಉಂಟಾದವು.


ಆದರೆ, ಅವನು ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಸ್ವಯಂನಿಯಂತ್ರವುಳ್ಳವನೂ ನ್ಯಾಯವಂತನೂ ಪರಿಶುದ್ಧನೂ ಶಿಸ್ತುಳ್ಳವನಾಗಿರಬೇಕು.


ದೇವಜನರಿಗೆ ಸಹಾಯ ಮಾಡುವುದನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯವಿಲ್ಲ.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು. ಅಪೊಸ್ತಲರು ಅದನ್ನು ಅಗತ್ಯವಿದ್ದವರಿಗೆ ತಕ್ಕಂತೆ ಹಂಚುತ್ತಿದ್ದರು.


ಸ್ತೆಫನನ ಕುಟುಂಬದವರು ಅಖಾಯದಲ್ಲಿ ಪ್ರಥಮವಾಗಿ ವಿಶ್ವಾಸಿಗಳಾದವರು ಎಂಬುದನ್ನು ನೀವು ಬಲ್ಲಿರಿ. ಅವರು ದೇವಜನರಿಗೆ ಸೇವೆ ಮಾಡುವುದಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡವರಾಗಿದ್ದಾರೆ.


ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ಸಂತೋಷದಿಂದ ಮಾಡಲಿ.


ಬಡವರನ್ನು ಪರಾಮರಿಸುವವರು ಧನ್ಯರು; ಕೇಡಿನ ಸಮಯದಲ್ಲಿ ಯೆಹೋವ ದೇವರು ಅವರನ್ನು ತಪ್ಪಿಸುವರು.


ಹುರಿದ ಕಡಲೆ, ಜೇನುತುಪ್ಪ, ಬೆಣ್ಣೆ, ಕುರಿ, ಹಸುವಿನ ಗಿಣ್ಣು ಇವುಗಳನ್ನು ದಾವೀದನಿಗೂ, ಅವನ ಸಂಗಡ ಇದ್ದ ಜನರಿಗೂ ತಿನ್ನುವುದಕ್ಕೆ ತಂದರು. ಏಕೆಂದರೆ, “ಮರುಭೂಮಿಯಲ್ಲಿ ಜನರು ಹಸಿದು ದಣಿದು ದಾಹಗೊಂಡಿರುವರು,” ಎಂದುಕೊಂಡರು.


ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ, ಅದರಲ್ಲಿ ಅವನಿಗೋಸ್ಕರ ಮಂಚವನ್ನೂ, ಮೇಜನ್ನೂ, ಕುರ್ಚಿಯನ್ನೂ, ದೀಪವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಇರಲಿ,” ಎಂದಳು.


ಆಕೆಯು ಬಡವರಿಗಾಗಿ ಕೈ ಬಿಚ್ಚಿ ಕೊಡುತ್ತಾಳೆ. ಹೌದು, ದಿಕ್ಕಿಲ್ಲದವರಿಗೆ ದಾನ ಮಾಡುತ್ತಾಳೆ.


ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.


ಪ್ರಿಯ ಸ್ನೇಹಿತನೇ, ಸಹೋದರರಿಗೂ ಪರಿಚಯವಿಲ್ಲದವರಿಗೂ ನೀನು ಮಾಡುವುದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು