Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:17 - ಕನ್ನಡ ಸಮಕಾಲಿಕ ಅನುವಾದ

17 ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವವಾದದ್ದೋ ಅದನ್ನೇ ಯೋಚಿಸಿ ಸಾಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾವನಾದರು ನಿಮಗೆ ಕೇಡುಮಾಡಿದರೆ, ಅದಕ್ಕೆ ಪ್ರತಿಯಾಗಿ ಅವನಿಗೆ ಕೇಡುಮಾಡಬೇಡಿ. ಎಲ್ಲಾ ಜನರು ಒಳ್ಳೆಯದೆಂದು ಯೋಚಿಸುವ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕೊನ್‍ಬಿ ತುಮ್ಕಾ ವಾಯ್ಟ್ ಕರ್ಲ್ಯಾರ್, ತುಮಿಬಿ ತೆಂಕಾ ವಾಯ್ಟುಚ್ ಕರುನಕಾಶಿ. ಸಗ್ಳ್ಯಾ ಲೊಕಾಂಚ್ಯಾ ನದ್ರೆತ್ ಬರೆ ದಿಸ್ತಾ ತೆಚ್ ಕರುಕ್ ಖಟ್ಪಟ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:17
22 ತಿಳಿವುಗಳ ಹೋಲಿಕೆ  

ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.


ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.


ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ.


ನಿಮಗಿರುವ ಒಳ್ಳೆಯದು ಪರರ ದೂಷಣೆಗೆ ಗುರಿಯಾಗದಿರಲಿ.


ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.


ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.


ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸಬೇಕೆಂದೂ, ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರುಗಿ ಇಡಬೇಕೆಂದೂ, ಪ್ರಯಾಣಕ್ಕಾಗಿ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು.


ನಾನು ನನ್ನ ಕೈಯನ್ನು ಯೆಹೋವ ದೇವರ ಅಭಿಷಿಕ್ತನ ಮೇಲೆ ಹಾಕದ ಹಾಗೆ ಯೆಹೋವ ದೇವರು ನನಗೆ ತಡೆಯಲಿ. ಈಗ ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೋ ನಾವು ಹೋಗೋಣ,” ಎಂದನು.


ನನಗೆ, “ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು,” ಎಂದು ಹೇಳಬೇಡ.


ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು.


ಅವಳು ಹಾಗೆಯೇ ಉದಯಕಾಲದವರೆಗೂ ಅವನ ಪಾದಗಳ ಬಳಿಯಲ್ಲಿ ಮಲಗಿದ್ದು ಯಾರಿಗೂ ಗೊತ್ತಾಗಬಾರದೆಂದು ಹೊತ್ತಿಗೆ ಮುಂಚೆ ಎದ್ದಳು. ಅವನು, “ಒಬ್ಬ ಸ್ತ್ರೀ ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯದಿರಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು