Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:7 - ಕನ್ನಡ ಸಮಕಾಲಿಕ ಅನುವಾದ

7 ಅದು ಇತರರಿಗೆ ಸೇವೆ ಸಲ್ಲಿಸುವುದಾಗಿದ್ದರೆ, ಅದನ್ನು ಇತರರಿಗೆ ಸೇವೆ ಸಲ್ಲಿಸುವುದರಲ್ಲಿ ಉಪಯೋಗಿಸಲಿ. ಅದು ಬೋಧಿಸುವ ವರವಾಗಿದ್ದರೆ, ಅವನು ಬೋಧಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸೇವಕನು ಸೇವೆಯಲ್ಲಿಯೂ ಬೋಧಕನು ಬೋಧಿಸುವುದರಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದು ಸಭಾಸೇವೆಯ ರೂಪವಾಗಿದ್ದರೆ ಸಭಾಸೇವೆಯನ್ನು ಮಾಡುತ್ತಾ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೇವೆಮಾಡುವ ವರವನ್ನು ಹೊಂದಿರುವವನು ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜರ್ ದೆವಾಚಿ ಸೆವಾ ಕರ್‍ತಲಿ ದೆನ್ಗಿ ಗಾವ್ಲಾ, ಹೊಲ್ಯಾರ್ ತೊ ದೆವಾಚಿ ಸೆವಾ ಕರುಂದಿತ್; ಅಪ್ನಿ ಎಕ್ ಶಿಕ್ವುತಲೊ ಮನುನ್ ರ್‍ಹಾಲ್ಯಾರ್ ತೊ ಶಿಕ್ವುತಲ್ಯಾತ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:7
31 ತಿಳಿವುಗಳ ಹೋಲಿಕೆ  

ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.


ಕರ್ತ ಯೇಸುವಿನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ದಯೆಯುಳ್ಳವನೂ ಬೋಧಿಸುವುದರಲ್ಲಿ ಪ್ರವೀಣನೂ ಸಹನೆಯುಳ್ಳವನೂ ಆಗಿರಬೇಕು.


ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನು ಇತರರಿಗೆ ಸಹ ಬೋಧಿಸಲು ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.


ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ಅರ್ಖಿಪ್ಪನಿಗೆ, “ನೀನು ಕರ್ತ ಯೇಸುವಿನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವುದಕ್ಕೆ ಎಚ್ಚರವಾಗಿರಬೇಕು!” ಎಂದು ಹೇಳಿರಿ.


ವಾಕ್ಯದಲ್ಲಿ ಉಪದೇಶ ಹೊಂದುವವನು, ಉಪದೇಶ ಮಾಡುವವನೊಂದಿಗೆ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ನಿಮಗೆ ಹಿತಕರವಾದುದ್ದೆಲ್ಲವನ್ನೂ ಬೋಧಿಸಲು ನಾನು ಹಿಂಜರಿಯಲಿಲ್ಲ. ಬಹಿರಂಗದಲ್ಲಿಯೂ ಮನೆಮನೆಗಳಲ್ಲಿಯೂ ನಾನು ನಿಮಗೆ ಬೋಧಿಸಿದ್ದೇನೆ.


ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.


ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.


ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,


ಬಳಿಕ ಅವನು ಸಿಂಹದಂತೆ ಕೂಗಿ ಹೀಗೆ ಹೇಳಿದನು, “ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.


ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು.


ಆಗ ನಾನು ಅತಿಕ್ರಮಿಸಿದವರಿಗೆ ನಿಮ್ಮ ಮಾರ್ಗಗಳನ್ನು ಬೋಧಿಸುವೆನು; ಮತ್ತು ಪಾಪಿಗಳು ನಿಮ್ಮ ಕಡೆಗೆ ತಿರುಗಿಕೊಳ್ಳುವರು.


ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಯೆಹೋವ ದೇವರ ಬಗ್ಗೆ ಭಯವನ್ನು ನಿಮಗೆ ಕಲಿಸುವೆನು.


ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.


ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.


ಸೇವೆಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಕರ್ತ ಆಗಿರುವವರು ಒಬ್ಬರೇ.


ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು