Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:9 - ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಚ್ಯಾ ಪ್ರೆಮಾತ್ ಕಸ್ಲೊಬಿ ಕಪಟ್ ರಾವ್ಚೆ ನ್ಹಯ್. ವಾಯ್ಟ್ ಹೊತ್ತೆ ಸೊಡುನ್ ಸೊಡಾ ಅನಿ ಬರೆ ಹೊತ್ತೆ ಧರುನ್ ಘೆವ್ನ್ ಜಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:9
30 ತಿಳಿವುಗಳ ಹೋಲಿಕೆ  

ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.


ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.


ನಾನು ಕೆಟ್ಟ ಕಾರ್ಯವನ್ನು ನನ್ನ ಕಣ್ಣುಗಳ ಮುಂದೆ ಒಪ್ಪಿಗೆಯಿಂದ ನೋಡುವುದಿಲ್ಲ. ಅವಿಶ್ವಾಸಿಗಳು ಮಾಡುವುದನ್ನು ದ್ವೇಷಿಸುವೆನು; ಅದರಲ್ಲಿ ನಾನು ಭಾಗವಹಿಸುವುದಿಲ್ಲ.


ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


ಇದು ನಿಮಗೆ ನನ್ನ ಆಜ್ಞೆಯಲ್ಲ. ಆದರೆ ಇತರರಿಗೆ ನಿಮಗಿರುವ ಈ ಸೇವಾಕಾರ್ಯದ ಉತ್ಸಾಹವನ್ನೂ ನಮ್ಮ ಮೇಲಿರುವ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾಗಿದೆಯೆಂಬುದನ್ನೂ ಹೋಲಿಕೆಮಾಡಿ ಪರೀಕ್ಷಿಸಿನೋಡಲು ಬಯಸುತ್ತಿದ್ದೇನೆ.


ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


ಪವಿತ್ರಾತ್ಮ ದೇವರ ಸಹಾಯದಿಂದ ಶುದ್ಧ ಮನಸ್ಸು, ತಿಳುವಳಿಕೆ, ಸಹನೆಯು ಮತ್ತು ದಯೆಯಿಂದಕೂಡಿ, ನಿಷ್ಕಪಟ ಪ್ರೀತಿಯಲ್ಲಿ ಜೀವಿಸಿದ್ದೇವೆ.


ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”


ನಾನು ನಿಮ್ಮ ಸೂತ್ರಗಳಿಂದ ತಿಳುವಳಿಕೆಯನ್ನು ಸಂಪಾದಿಸಿಕೊಂಡಿದ್ದೇನೆ; ಆದ್ದರಿಂದ ಪ್ರತಿಯೊಂದು ದುರ್ಮಾರ್ಗವನ್ನೂ ದ್ವೇಷಿಸುತ್ತೇನೆ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.


ಸುಳ್ಳುತನವನ್ನು ನಾನು ದ್ವೇಷಿಸಿ ಅಸಹ್ಯಪಡುತ್ತೇನೆ ಆದರೆ ನಾನು ನಿಮ್ಮ ನಿಯಮವನ್ನು ಪ್ರೀತಿಸುತ್ತೇನೆ.


ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.


ಅವನ ಬಾಯಿಯ ಮಾತುಗಳು ಬೆಣ್ಣೆಗಿಂತ ನುಣ್ಣಗಾಗಿವೆ; ಆದರೆ ಅವನ ಹೃದಯದಲ್ಲಿ ಕಾಳಗವಿದೆ; ಅವನ ಮಾತುಗಳು ಎಣ್ಣೆಗಿಂತ ನಯವಾಗಿವೆ; ಆದರೆ ಅವು ಬಿಚ್ಚುಗತ್ತಿಗಳಾಗಿವೆ.


ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ.


ಏಕೆಂದರೆ ನಮ್ಮ ಬೋಧನೆಯು ದುರುದ್ದೇಶದಿಂದಲೂ ಇಲ್ಲವೆ ವಂಚನೆಗಳಿಂದಲೂ ತಪ್ಪುಗಳಿಂದಲೂ ಕೂಡಿದ್ದಲ್ಲ.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು.


ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ.


ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ, ನಮಸ್ಕಾರ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು