Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:7 - ಕನ್ನಡ ಸಮಕಾಲಿಕ ಅನುವಾದ

7 ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಯಾರ್ಯಾರಿಗೆ ಏನೇನು ಕೊಡಬೇಕೋ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೋ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚೆಸಾಟ್ನಿ ಜೆ ಕೊನಾ-ಕೊನಾಚೆ ತುಮಿ ದಿತಲೆ ಹಾಶಿ, ತೆ ದಿವಾ; ಸ್ವತಾಚಿ ಹೊಂವ್ದಿತ್, ಅಸ್ತಿಚಿ ತೆರ್‍ಗಿ ಹೊಂವ್ದಿತ್ ದಿವಾ, ಅನಿ ತೆಂಕಾ ಮಾನ್ ಅನಿ ಗೌರವ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:7
23 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೂ ದೇವರದ್ದನ್ನು ದೇವರಿಗೂ ಕೊಡಿರಿ,” ಎಂದರು.


ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು. ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, “ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?” ಎಂದು ಕೇಳಿದರು.


ಮಗನೇ, ಯೆಹೋವ ದೇವರಿಗೂ, ಅರಸನಿಗೂ ಭಯಪಡು; ತಿರುಗಿಬೀಳುವವರ ಸಹವಾಸ ಮಾಡಬೇಡ,


ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ಅದಕ್ಕೆ ಅವರು, “ಕೈಸರನದು,” ಎಂದರು. ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು.


ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.


ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.


ದೇವರ ನಾಮವೂ ನಮ್ಮ ಬೋಧನೆಯೂ ದೂಷಣೆಗೆ ಗುರಿಯಾಗದಂತೆ ದಾಸತ್ವದ ನೊಗ ಹೊತ್ತಿರುವವರು ತಮ್ಮ ಸ್ವಂತ ಯಜಮಾನರನ್ನು ಪೂರ್ಣ ಗೌರವಕ್ಕೆ ಯೋಗ್ಯರೆಂದೆಣಿಸಲಿ.


ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.


ಅವರು ಯೇಸುವಿನ ಮೇಲೆ ದೂರು ಹೇಳಲಾರಂಭಿಸಿ, “ಈ ನಮ್ಮ ಜನಾಂಗವು ದಂಗೆಯೇಳುವಂತೆಯೂ ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದೂ ಹೇಳಿ ಕೈಸರನಿಗೆ ತೆರಿಗೆ ಕೊಡದಂತೆ ಈತನು ಅಡ್ಡಿಮಾಡುತ್ತಿರುವುದನ್ನೂ ನಾವು ಕಂಡಿದ್ದೇವೆ,” ಎಂದರು.


ಆಗ ಯೇಸು ಉತ್ತರವಾಗಿ ಅವರಿಗೆ, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಹೇಳಿದರು. ಇದಕ್ಕೆ ಅವರು ಯೇಸುವಿನ ವಿಷಯವಾಗಿ ಆಶ್ಚರ್ಯಪಟ್ಟರು.


ಸಮುಯೇಲನು ಯೆಹೋವ ದೇವರಿಗೆ ಮೊರೆ ಇಟ್ಟಿದ್ದರಿಂದ, ಆ ದಿವಸದಲ್ಲೇ ಯೆಹೋವ ದೇವರು ಗುಡುಗನ್ನೂ, ಮಳೆಯನ್ನೂ ಕಳುಹಿಸಿದರು. ಆಗ ಜನರೆಲ್ಲರು ಯೆಹೋವ ದೇವರಿಗೂ, ಸಮುಯೇಲನಿಗೂ ಬಹಳವಾಗಿ ಭಯಪಟ್ಟರು.


“ ‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.


“ ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.


ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಸೋಮಾರಿತನವನ್ನು ಕಲಿಯುತ್ತಾರೆ. ಸೋಮಾರಿಗಳಾಗುವುದಷ್ಟೇ ಅಲ್ಲ, ಹರಟೆ ಮಾತನಾಡುವವರೂ ಇತರರ ಕೆಲಸದಲ್ಲಿ ತಲೆಹಾಕುವವರಾಗಿ ಆಡಬಾರದ ಮಾತುಗಳನ್ನಾಡುವವರೂ ಆಗುತ್ತಾರೆ.


ನಿನಗೆ ಶಕ್ತಿಯಿರುವಾಗಲೇ ಇತರರಿಗೆ ಉಪಕಾರಮಾಡು ಒಳಿತು ಮಾಡುವುದನ್ನು ನಿನ್ನಲ್ಲಿಯೇ ಇಟ್ಟುಕೊಳ್ಳಬೇಡ.


ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ನಮಗೆ ಮೋಶೆಯ ನಿಯಮಕ್ಕೆ ಅನುಸಾರವಾದದ್ದೋ?” ಎಂದು ಕೇಳಿದರು.


ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.


ಇದರ ನಿಮಿತ್ತವಾಗಿಯೇ ನೀವು ತೆರಿಗೆಯನ್ನು ಪಾವತಿ ಮಾಡುತ್ತೀರಿ. ಏಕೆಂದರೆ, ಅಧಿಕಾರಿಗಳು ಇದರಲ್ಲಿಯೇ ನಿರತರಾಗಿರುವ ದೇವರ ಸೇವಕರಾಗಿರುತ್ತಾರೆ.


ಅವರಲ್ಲಿ ಒಬ್ಬಳು, “ನನ್ನ ಒಡೆಯನೇ, ನಾನೂ, ಈ ಹೆಣ್ಣು ಮಗಳು ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು