Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:18 - ಕನ್ನಡ ಸಮಕಾಲಿಕ ಅನುವಾದ

18 ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಶೆ ಕ್ರಿಸ್ತಾಚಿ ಸೆವಾ ಕರಲ್ಲೆ ತುಮಿ ದೆವಾಕ್ ಮಾನಿ ಸರ್ಕೆ ಕರ್‍ತ್ಯಾಶಿ, ಅನಿ ಲೊಕಾಂಚ್ಯಾ ಮದ್ದಿ ನಾವ್ ಕಮ್ವುನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:18
29 ತಿಳಿವುಗಳ ಹೋಲಿಕೆ  

ಏಕೆಂದರೆ, ಕರ್ತ ಯೇಸುವಿನ ದೃಷ್ಟಿಯಲ್ಲಿ ಮಾತ್ರ ಅಲ್ಲ, ಜನರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡಬೇಕೆಂಬುದು ನಮ್ಮ ಪ್ರಯಾಸವಾಗಿದೆ.


ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.


ಏಕೆಂದರೆ ಇದು ನಮ್ಮ ರಕ್ಷಕರಾದ ದೇವರ ಮುಂದೆ ಒಳ್ಳೆಯದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಇದೆ.


ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ಅದಕ್ಕೆ ಬದಲಾಗಿ, ಸರ್ವ ವಿಷಯಗಳಲ್ಲಿ ನಾವು ದೇವರ ಸೇವಕರಾಗಿದ್ದೇವೆಂದು ತೋರಿಸುತ್ತೇವೆ. ಕಷ್ಟ, ಸಂಕಟ ತೊಂದರೆಗಳಲ್ಲಿ ಮಹಾ ದೀರ್ಘತಾಳ್ಮೆಯನ್ನು ತೋರಿಸುತ್ತೇವೆ.


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ದೇವರು ಕರೆದಾಗ ಒಬ್ಬನು ದಾಸನಾಗಿದ್ದರೂ, ಅವನು ಕರ್ತ ದೇವರಲ್ಲಿ ಸ್ವತಂತ್ರನು. ಅದೇ ಪ್ರಕಾರ, ಒಬ್ಬನು ಸ್ವತಂತ್ರನಾಗಿದ್ದಾಗ ಕರ್ತದೇವರ ಕರೆಹೊಂದಿದ್ದರೆ, ಅವನು ಕ್ರಿಸ್ತನಿಗೆ ದಾಸನು.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.


ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.


ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.


ದೇವರು ಪ್ರತಿಯೊಂದು ದೇಶದಲ್ಲಿಯೂ ತಮಗೆ ಭಯಪಡುವ ಮತ್ತು ಸರಿಯಾದದ್ದನ್ನು ಮಾಡುವ ಜನರನ್ನು ಸ್ವೀಕರಿಸುತ್ತಾರೆ.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.


ಆದ್ದರಿಂದ ನಾವು ದೇಹದಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ ಕರ್ತನನ್ನು ಮೆಚ್ಚಿಸಬೇಕೆಂಬುದೇ ನಮ್ಮ ಗುರಿಯಾಗಿದೆ.


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು