Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:14 - ಕನ್ನಡ ಸಮಕಾಲಿಕ ಅನುವಾದ

14 ನನ್ನ ಪ್ರಿಯರೇ, ನೀವು ಒಳ್ಳೆಯತನದಿಂದ ಪೂರ್ಣವಾದವರೂ ಸಕಲ ತಿಳುವಳಿಕೆಯಿಂದ ತುಂಬಿದವರೂ ಆಗಿದ್ದು, ಒಬ್ಬರಿಗೊಬ್ಬರು ಬುದ್ಧಿ ಹೇಳುವುದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ಬಗ್ಗೆ ನನಗೆ ಭರವಸೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ಸಹೋದರರೇ, ನೀವಂತೂ ಒಳ್ಳೇತನದಿಂದ ಭರಿತರಾಗಿಯೂ ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಳ್ಳೆಯತನವು ತುಂಬಿದೆಯೆಂದು ನನಗೆ ನಿಶ್ಚಯವಾಗಿ ಗೊತ್ತಿದೆ. ಅಗತ್ಯವಾದ ಸಕಲ ಜ್ಞಾನವು ನಿಮಗಿದೆಯೆಂದು ಮತ್ತು ಒಬ್ಬರಿಗೊಬ್ಬರು ಸಲಹೆ ನೀಡಬಲ್ಲಿರೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮಿ ಬರ್‍ಯಾ ಮನಾಚಿ ಲೊಕಾ ಅನಿ ಸಗ್ಳ್ಯಾ ರಿತಿಚ್ಯಾ ಶಾನೆಪಾನಾನಿ ಅನಿ ಭರಲ್ಲಿ ಲೊಕಾ ತಸೆಮನುನ್ ಎಕಾಮೆಕಾಕ್ನಿ ಬುದ್‍ಬಾಳ್ ಸಾಂಗುಕ್ ತುಮ್ಚ್ಯಾನ್ ಹೊತಾ ಮನುನ್ ಮಾಕಾ ಖರೆಚ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:14
25 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ.


ನೀವು ಸತ್ಯವನ್ನು ತಿಳಿಯದವರೆಂದು ನಾನು ಭಾವಿಸುತ್ತಿಲ್ಲ, ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಬರುವುದಿಲ್ಲ ಎಂಬುವುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.


ಈಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ಎಲ್ಲಾ ತಿಳುವಳಿಕೆಯಿರುವ ನೀನು ವಿಗ್ರಹದ ಗುಡಿಯಲ್ಲಿ ತಿನ್ನುವುದನ್ನು ನೋಡಿದರೆ ಬಲಹೀನ ಮನಸ್ಸಾಕ್ಷಿಯುಳ್ಳ ಸಹೋದರನು, ತಾನೂ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನು ತಿನ್ನುವುದಕ್ಕೆ ಧೈರ್ಯಗೊಳ್ಳುವನಲ್ಲವೇ?


ಆದರೆ ಈ ತಿಳುವಳಿಕೆಯು ಎಲ್ಲರಲ್ಲಿಯೂ ಇಲ್ಲ. ಕೆಲವರು ಇದುವರೆಗೂ ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನುವ ರೂಢಿಯಲ್ಲಿದ್ದು, ಅವರು ವಿಗ್ರಹಕ್ಕೆ ನೈವೇದ್ಯ ಮಾಡಿ ತಿನ್ನುವುದಾಗಿ ಭಾವಿಸಿಕೊಳ್ಳುತ್ತಾರೆ. ಹೀಗೆ ಅವರ ಮನಸ್ಸಾಕ್ಷಿ ಬಲಹೀನವಾಗಿರುವುದರಿಂದ, ಅದು ಅಶುದ್ಧವಾಗಿರುತ್ತದೆ.


ನೀವು ಕ್ರಿಸ್ತ ಯೇಸುವಿನಲ್ಲಿ ಜ್ಞಾನದಲ್ಲಿಯೂ ಮಾತುಗಳಲ್ಲಿಯೂ ಎಲ್ಲಾ ಸಮೃದ್ಧಿಯನ್ನು ಹೊಂದಿದ್ದೀರಿ.


ನಿನ್ನ ವಿಧೇಯತೆಯಲ್ಲಿ ಭರವಸೆಯುಳ್ಳವನಾಗಿ ನಾನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುವೆಯೆಂದು ನನಗೆ ಗೊತ್ತಿದೆ.


ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ.


ಪ್ರಿಯರೇ, ನಾವು ಈ ರೀತಿಯಾಗಿ ಮಾತನಾಡಿದರೂ ನಿಮ್ಮ ವಿಷಯವಾಗಿಯೂ ನೀವು ಉತ್ತಮವಾದವುಗಳನ್ನೂ ರಕ್ಷಣೆಯ ಕಾರ್ಯಗಳನ್ನೂ ಹೊಂದಿದ್ದೀರಿ ಎಂಬ ನಿಶ್ಚಯ ನಮಗಿದೆ.


ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.


ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನಿಕೆಯಲ್ಲಿಯೂ ಮೊದಲು ಇದ್ದ ನಂಬಿಕೆಯು ಈಗ ನಿನ್ನಲ್ಲಿಯೂ ಇದೆಯೆಂದು ನಾನು ದೃಢವಾಗಿ ನಂಬಿದ್ದೇನೆ.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.


ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು,


ಹೇಗೆ ನೀವು ವಿಶ್ವಾಸ, ವಾಕ್ಚಾತುರ್ಯ, ತಿಳುವಳಿಕೆ, ಉತ್ಸಾಹ ಹಾಗೂ ನಮ್ಮ ಮೇಲೆ ನಿಮಗಿರುವ ಪ್ರೀತಿ, ಇವೆಲ್ಲವುಗಳಲ್ಲಿ ನೀವು ಸಮೃದ್ಧರಾಗಿದ್ದಂತೆ, ಈ ದಾನವೆಂಬ ಕೃಪಾಕಾರ್ಯದಲ್ಲಿಯೂ ಸಮೃದ್ಧರಾಗಿರಿ.


ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು