Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:8 - ಕನ್ನಡ ಸಮಕಾಲಿಕ ಅನುವಾದ

8 ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾಕಂದರೆ ನಾನು ಹೇಳುವದೇನಂದರೆ - ಕ್ರಿಸ್ತನು ಪಿತೃಗಳಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಒಳಗಾದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳು ಸತ್ಯವಾದುವುಗಳೆಂದು ತೋರಿಸುವುದಕ್ಕಾಗಿಯೂ ದೇವರು ಆ ವಾಗ್ದಾನಗಳನ್ನು ನೆರವೇರಿಸುತ್ತಾನೆ ಎಂಬುದನ್ನು ನಿರೂಪಿಸುವುದಕ್ಕಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ಮಿಯಾ ತುಮ್ಕಾ ಸಾಂಗ್ತಾ ಅಪ್ನಿ ವಿಶ್ವಾಸಿ ಮನುನ್ ದಾಕ್ವುಸಾಟ್ನಿ ದೆವಾನ್ ಅಮ್ಚ್ಯಾ ಅದ್ಲ್ಯಾ ಲೊಕಾಕ್ನಿ ದಿಲ್ಲ್ಯಾ ಗೊಸ್ಟಿಯಾ ಪುರಾ ಕರುಸಾಟ್ನಿ ಕ್ರಿಸ್ತಾಕ್ ಜುದೆವಾಂಚೊ ಸೆವಕ್ ಕರುನ್ ನೆಮ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:8
29 ತಿಳಿವುಗಳ ಹೋಲಿಕೆ  

ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು.


ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.


ದೇವರು ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತ ಯೇಸುವಿನಲ್ಲಿ “ಹೌದು” ಎಂದೇ ಇರುತ್ತದೆ. ಕ್ರಿಸ್ತ ಯೇಸುವಿನ ಮೂಲಕ ನಾವು ಅದಕ್ಕೆ “ಆಮೆನ್” ಎಂದು ದೇವರ ಮಹಿಮೆಗಾಗಿ ಎನ್ನುತ್ತೇವೆ.


ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


ಯೆಹೂದ್ಯರಲ್ಲದವರು ಪವಿತ್ರಾತ್ಮನಿಂದ ಪರಿಶುದ್ಧರಾಗಿ, ದೇವರಿಗೆ ಅಂಗೀಕೃತವಾದ ಕಾಣಿಕೆಗಳಾಗಬೇಕೆಂಬ ಕಾರಣದಿಂದ, ನಾನು ಯೆಹೂದ್ಯರಲ್ಲದವರಿಗೆ ಕ್ರಿಸ್ತ ಯೇಸುವಿನ ಸೇವಕನಾಗಿ ದೇವರ ಸುವಾರ್ತೆಯನ್ನು ಪ್ರಕಟಿಸಲು ದೇವರು ನನಗೆ ಕೃಪೆ ನೀಡಿದ್ದಾರೆ.


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರ ಅಪನಂಬಿಕೆಯು ದೇವರ ಪ್ರಾಮಾಣಿಕತೆಯನ್ನು ರದ್ದುಗೊಳಿಸುವುದೇ?


ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.


ಒಂದು ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದ ನೀವು ಇಸ್ರಾಯೇಲರ ಅವಿಧೇಯತೆಯಿಂದ ಈಗ ಕರುಣೆಯನ್ನು ಹೊಂದಿರುವಿರಿ.


ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.


ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ.


ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು.


ನಾನು ನಿಮ್ಮ ಮನಸ್ಸಾಕ್ಷಿಯ ಬಗ್ಗೆ ಅಲ್ಲ, ಇತರರ ಮನಸ್ಸಾಕ್ಷಿಯ ಬಗ್ಗೆ ಸೂಚಿಸುತ್ತಿದ್ದೇನೆ. ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಏಕೆ ಅಡ್ಡಿಯಾಗಬೇಕು?


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ಹಾಗಾದರೆ ನಾನು ಹೇಳುವುದೇನು? ವಿಗ್ರಹಕ್ಕೆ ಅರ್ಪಿಸಿದ್ದು ಅಥವಾ ವಿಗ್ರಹಕ್ಕೆ ಏನಾದರೂ ಮಹತ್ವವಿರುತ್ತದೆಯೋ? ನಿಶ್ಚಯವಾಗಿಯೂ ಇಲ್ಲ.


ನಿಮ್ಮಲ್ಲಿ ಒಬ್ಬನು, “ನಾನು ಪೌಲನವನು,” ಇನ್ನೊಬ್ಬನು, “ನಾನು ಅಪೊಲ್ಲೋಸನವನು,” ಬೇರೊಬ್ಬನು, “ನಾನು ಕೇಫನವನು,” ಇನ್ನೊಬ್ಬನು, “ನಾನು ಕ್ರಿಸ್ತನವನು,” ಎಂದು ಹೇಳುತ್ತೀರಂತೆ.


ನನ್ನ ಬಾಯಿಯು ಸತ್ಯವನ್ನು ಮಾತಾಡುವುದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು