Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:18 - ಕನ್ನಡ ಸಮಕಾಲಿಕ ಅನುವಾದ

18 ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಸ್ಲಿ ಲೊಕಾ ಕ್ರಿಸ್ತಾ ಅಮ್ಚ್ಯಾ ಧನಿಯಾಚಿ ಸೆವಾ ಕರಿನ್ಯಾತ್, ಗೊಡ್-ಗೊಡ್ ಗೊಸ್ಟಿಯಾನಿ ಅನಿ ಪಶ್ವುತಲ್ಯಾ ಬೊಲ್ನ್ಯಾನಿ ತೆನಿ ವಿಶ್ವಾಸಾತ್ ಬಾರಿಕ್ ಹೊತ್ತ್ಯಾಂಚಿ ಮನಾ ಪಿಸ್ವುನ್ ಟಾಕ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:18
54 ತಿಳಿವುಗಳ ಹೋಲಿಕೆ  

ಯಾರೂ ತಮ್ಮ ತರ್ಕದ ನಯಮಾತುಗಳಿಂದ ನಿಮ್ಮನ್ನು ವಂಚಿಸಬಾರದೆಂದು ನಾನು ಇದನ್ನು ಹೇಳುತ್ತಿದ್ದೇನೆ.


ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ಹೀಗೆ ಅನಾರೋಗ್ಯಕರವಾದ ವಿವಾದಗಳನ್ನೂ ಕೆಲವು ಮಾತುಗಳ ಕುರಿತಾಗಿರುವ ತರ್ಕಗಳನ್ನೂ ಸೃಷ್ಟಿಸುವ ಪ್ರಸಿದ್ಧರಾಗಿದ್ದಾರೆ. ಅಂಥವರು ದೇವಭಕ್ತಿಯನ್ನು ಆರ್ಥಿಕ ಲಾಭವನ್ನಾಗಿ ಭಾವಿಸುವವರಾಗಿದ್ದಾರೆ.


ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. ಆದರೆ ಅವರಿಗೆ ತಿನ್ನಲು ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ಎಲ್ಲಾ ವಿಧವಾದ ದುಷ್ಟತನದ ವಂಚನೆಯಿಂದಲೂ ಕೂಡಿ ನಾಶವಾಗುವವರಲ್ಲಿ ಇದು ಸಂಭವಿಸುವುದು. ಏಕೆಂದರೆ ಅವರು ರಕ್ಷಣೆ ಹೊಂದುವಂತೆ ಸತ್ಯವನ್ನು ಪ್ರೀತಿಸಲು ನಿರಾಕರಿಸಿದ ಕಾರಣದಿಂದ ನಾಶವಾಗಿ ಹೋಗುವರು.


ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ


ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ.


ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.


ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ.


ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿಸುವರು.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?


ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ’


ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.


ಅರಿವಿಲ್ಲದವರು ಯಾವ ಮಾತನ್ನಾದರೂ ನಂಬುತ್ತಾರೆ, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ಮುಗ್ಧರೇ, ಜ್ಞಾನವನ್ನು ಗ್ರಹಿಸಿರಿ. ಬುದ್ಧಿಹೀನರೇ, ನೀವು ತಿಳುವಳಿಕೆಯ ಹೃದಯದವರಾಗಿರಿ.


ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು; ಅದು ಮುಗ್ಧರಿಗೆ ಅರಿವನ್ನು ನೀಡುವುದು.


ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.


ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.


ನನ್ನ ಜನರಾದ ಇಸ್ರಾಯೇಲರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದಕ್ಕೆ ನನ್ನ ವಾಸಸ್ಥಳದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ, ಅರ್ಪಣೆಯನ್ನೂ ನೀವು ಒದ್ದು, ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವುದೇನು?’


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲರೆಲ್ಲರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲರ ಹೃದಯಗಳನ್ನು ಗೆದ್ದುಕೊಂಡನು.


ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.


ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು, ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಸೇರಿಕೊಳ್ಳುವರು.


ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು