Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:21 - ಕನ್ನಡ ಸಮಕಾಲಿಕ ಅನುವಾದ

21 ನನ್ನ ಜೊತೆ ಕೆಲಸದವನಾಗಿರುವ ತಿಮೊಥೆಯನು ನಿಮಗೆ ವಂದನೆಗಳನ್ನು ತಿಳಿಸುತ್ತಾನೆ. ಹಾಗೆಯೇ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ಸಹೋದ್ಯೋಗಿಯಾದ ತಿಮೊಥೇಯನು ಮತ್ತು ನನ್ನ ಸ್ವದೇಶೀಯರಾದ ಲೂಕ್ಯ, ಯಾಸೋನನು, ಸೋಸಿಪತ್ರನು ಇವರುಗಳು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಜೊತೆಕೆಲಸದವನಾದ ತಿಮೊಥೆಯನೂ ನನ್ನ ಸ್ವಜನರಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ಸಹೋದ್ಯೋಗಿಯಾದ ತಿಮೊಥೆಯನು ಮತ್ತು ನನ್ನ ಸಂಬಂಧಿಕರಾದ ಲೂಕ್ಯ, ಯಾಸೋನ ಮತ್ತು ಸೋಸಿಪತ್ರ ನಿಮಗೆ ವಂದನೆ ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತಿಮೊತಿ ಮಾಜೊ ವಾಂಗ್ಡಿ ತುಮ್ಕಾ ನಮಸ್ಕಾರ್ ಮನುಲಾ, ಅನಿ ತಸೆಚ್ ಲುಸಿಯಸ್, ಜೆಸನ್ ಅನಿ ಸೊಸಿಪಾತೆರ್ ಮಾಜೆ ಜುದೆವ್ ಭಾವ್ ತುಮ್ಕಾ ನಮಸ್ಕಾರ್ ಮನುಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:21
24 ತಿಳಿವುಗಳ ಹೋಲಿಕೆ  

ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.


ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.


ನನ್ನ ಸಂಬಂಧಿಯಾಗಿರುವ ಹೆರೊಡಿಯೋನನಿಗೆ ವಂದನೆಗಳು, ಕರ್ತನಲ್ಲಿರುವ ನಾರ್ಕಿಸ್ಸನ ಕುಟುಂಬದವರಿಗೆ ವಂದನೆಗಳು.


ನನ್ನ ಬಂಧುಗಳೂ ಜೊತೆ ಸೆರೆಯವರೂ ಆದ ಅಂದ್ರೋನಿಕನಿಗೂ ಯೂನ್ಯಳಿಗೂ ವಂದನೆಗಳು. ಅವರು ಅಪೊಸ್ತಲರಲ್ಲಿ ಪ್ರಸಿದ್ಧರೂ ಮತ್ತು ನನಗಿಂತ ಮೊದಲೇ ಕ್ರಿಸ್ತನಲ್ಲಿದ್ದವರೂ ಆಗಿರುತ್ತಾರೆ.


ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.


ನನ್ನ ಪ್ರಿಯ ಪುತ್ರನಾದ ತಿಮೊಥೆಯನಿಗೆ ಬರೆಯುವುದು: ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ.


ನಮ್ಮ ತಂದೆ ದೇವರಲ್ಲಿಯೂ, ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ತಿಮೊಥೆಯರು ಬರೆಯುವುದು:


ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಹಾಗೂ ಪ್ರೀತಿಯ ವಿಷಯವಾಗಿ ಒಳ್ಳೆಯ ವರ್ತಮಾನವನ್ನು ತಂದಿದ್ದಾನೆ. ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ನೆನಪಿಸಿಕೊಂಡು, ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವುದಕ್ಕೆ ಹಾರೈಸುತ್ತೀರೆಂಬುದನ್ನು ತಿಳಿಸಿದ್ದಾನೆ.


ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.


ತಂದೆ ದೇವರಲ್ಲಿಯೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ, ಪೌಲ, ಸಿಲ್ವಾನ ಹಾಗೂ ತಿಮೊಥೆ ಇವರು ಬರೆಯುವ ಪತ್ರ: ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ,


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ನಾನು, ಸಿಲ್ವಾನ ಮತ್ತು ತಿಮೊಥೆಯನು ನಿಮ್ಮಲ್ಲಿ ಬೋಧಿಸಿದ ದೇವರ ಪುತ್ರನಾದ ಯೇಸು ಕ್ರಿಸ್ತನು ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ. ಯಾವಾಗಲೂ ಅದು ಕ್ರಿಸ್ತನಲ್ಲಿ ಹೌದು ಎಂದೇ ಆಗಿರುತ್ತಾನೆ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ಕೊರಿಂಥದಲ್ಲಿರುವ ದೇವರ ಸಭೆಗೆ ಮತ್ತು ಅಖಾಯ ಪ್ರಾಂತದಲ್ಲಿರುವ ಎಲ್ಲಾ ಪವಿತ್ರ ಜನರಿಗೆ ಬರೆಯುವ ಪತ್ರ:


ತನ್ನ ಇಬ್ಬರು ಸಹಾಯಕರಾದ ತಿಮೊಥೆ ಮತ್ತು ಎರಸ್ತನನ್ನು ಮಕೆದೋನ್ಯಕ್ಕೆ ಕಳುಹಿಸಿ ತಾನು ಇನ್ನೂ ಸ್ವಲ್ಪಕಾಲ ಏಷ್ಯಾ ಪ್ರಾಂತದಲ್ಲಿ ಇದ್ದನು.


ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.


ಆದ್ದರಿಂದ ಸಹೋದರರು ಕೂಡಲೇ ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೆ ಬೆರೋಯದಲ್ಲಿಯೇ ಉಳಿದುಕೊಂಡರು.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು