Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:23 - ಕನ್ನಡ ಸಮಕಾಲಿಕ ಅನುವಾದ

23 ಇಲ್ಲಿ ನನಗೂ ಇಡೀ ಸಭೆಗೂ ಅತಿಥಿ ಸತ್ಕಾರ ಮಾಡುತ್ತಿರುವ ಗಾಯನು ತನ್ನ ವಂದನೆಗಳನ್ನು ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾಗಿರುವ ಎರಸ್ತನೂ ಮತ್ತು ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಗಾಯನು ನನಗೆ ಅತಿಥಿಸತ್ಕಾರ ಮಾಡುತ್ತಿದ್ದಾನೆ. ಅಲ್ಲದೆ ಸಭಾಕೂಟಕ್ಕಾಗಿ ಅವನ ಮನೆಯನ್ನೇ ಉಪಯೋಗಿಸಲಾಗುತ್ತಿದೆ. ಅವನು ಸಹ ನಿಮಗೆ ವಂದನೆ ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾದ ಎರಸ್ತನು ಮತ್ತು ಸಹೋದರನಾದ ಕ್ವರ್ತನು ನಿಮಗೆ ವಂದನೆಯನ್ನು ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಾಕಾ ಅನಿ ಸಗ್ಳ್ಯಾ ವಿಶ್ವಾಸಾತ್ ಹೊತ್ತ್ಯಾ ಲೊಕಾಂಚ್ಯಾ ತಾಂಡ್ಯಾಕ್ ಅಪ್ನಾಚ್ಯಾ ಘರಾತ್ ಸ್ವಾಗತ್ ಕರ್‍ತಲೊ ಗಾಯುಸ್ ತುಮ್ಕಾ ನಮಸ್ಕಾರ್ ಧಾಡುನ್ ದಿವ್ಲಾ. ಹ್ಯಾ ಶಾರಾಚೊ, ಪೈಶ್ಯಾಚಿ ಜವಾಬ್ದಾರಿ ಬಗುನ್ ಘೆತಲೊ ಎರಾಸ್ತುಸ್, ಅನಿ ಅಮ್ಚೊ ಭಾವ್ ಕ್ವಾರ್ತುಸ್ ತುಮ್ಕಾ ನಮಸ್ಕಾರ್ ಧಾಡುನ್ ದಿವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:23
7 ತಿಳಿವುಗಳ ಹೋಲಿಕೆ  

ಕ್ರಿಸ್ಪನನ್ನು ಮತ್ತು ಗಾಯನನ್ನು ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಕೊಡಲಿಲ್ಲ. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರ ಹೇಳುತ್ತೇನೆ.


ತನ್ನ ಇಬ್ಬರು ಸಹಾಯಕರಾದ ತಿಮೊಥೆ ಮತ್ತು ಎರಸ್ತನನ್ನು ಮಕೆದೋನ್ಯಕ್ಕೆ ಕಳುಹಿಸಿ ತಾನು ಇನ್ನೂ ಸ್ವಲ್ಪಕಾಲ ಏಷ್ಯಾ ಪ್ರಾಂತದಲ್ಲಿ ಇದ್ದನು.


ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ಆದರೆ ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ನಾನು ಮಿಲೇತದಲ್ಲಿ ಬಿಟ್ಟಿದ್ದೇನೆ.


ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.


ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು