Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:12 - ಕನ್ನಡ ಸಮಕಾಲಿಕ ಅನುವಾದ

12 ನಿಯಮವಿಲ್ಲದವರಾಗಿ ಪಾಪಮಾಡಿದವರು ನಿಯಮವಿಲ್ಲದೆಯೇ ನಾಶಹೊಂದುವರು. ನಿಯಮಕ್ಕೆ ಅಧೀನರಾಗಿದ್ದು ಪಾಪಮಾಡಿದವರು ನಿಯಮದ ಮೂಲಕವಾಗಿ ತೀರ್ಪನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೋಶೆಯ ಧರ್ಮಶಾಸ್ತ್ರದ ಅರಿವಿಲ್ಲದೆ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಒಳಗಾಗದೆಯೋ ನಾಶವಾಗುತ್ತಾರೆ. ಆ ಧರ್ಮಶಾಸ್ತ್ರದ ಅರಿವಿದ್ದೂ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಗುರಿಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಧರ್ಮಶಾಸ್ತ್ರವನ್ನು ಹೊಂದಿರುವ ಜನರು ಮತ್ತು ಧರ್ಮಶಾಸ್ತ್ರದ ಬಗ್ಗೆ ಕೇಳಿಯೂ ಇಲ್ಲದ ಜನರು ಪಾಪ ಮಾಡುವಾಗ ಅವರಿಬ್ಬರಿಗೂ ಯಾವ ವ್ಯತ್ಯಾಸವಿರುವುದಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡುವವರು ನಾಶವಾಗುವರು. ಅದೇ ರೀತಿಯಲ್ಲಿ, ಧರ್ಮಶಾಸ್ತ್ರವನ್ನು ಹೊಂದಿದವರಾಗಿ ಪಾಪ ಮಾಡುವವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜುದೆವ್ ನ್ಹಯ್ ಹೊತ್ತ್ಯಾಕ್ನಿ ಮೊಯ್ಜೆಚೆ ಖಾಯ್ದೆ ನಾತ್; ತೆನಿ ಪಾಪ್ ಕರ್‍ಲ್ಯಾನಿ ಅನಿ ಖಾಯ್ದ್ಯಾನಿತ್ನಾ ಚುಕ್ವುನ್ ಘೆಟ್ಲ್ಯಾನಿ. ಜುದೆವಾಕ್ನಿ ಖಾಯ್ದೆ ಹಾತ್; ತೆನಿ ಪಾಪ್ ಕರ್‍ಲ್ಯಾನಿ ಅನಿ ಖಾಯ್ದ್ಯಾ ಸರ್ಕೆ ತೆಂಚಿ ಝಡ್ತಿ ಕರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:12
23 ತಿಳಿವುಗಳ ಹೋಲಿಕೆ  

ನಾನು ನಿಯಮ ಇಲ್ಲದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು. ನಾನು ಕ್ರಿಸ್ತ ಯೇಸುವಿನ ನಿಯಮಕ್ಕೆ ಒಳಗಾದವನಾಗಿದ್ದರೂ ನಾನು ದೇವರ ನಿಯಮದಿಂದ ಸ್ವತಂತ್ರವಾದವನಲ್ಲ.


ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ.


ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಸೊದೋಮ್ ಪಟ್ಟಣದ ಗತಿಯು ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ.


ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.


ಆದರೂ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.


ಅವರು, “ದೇವರ ನಿಯಮದ ಈ ಮಾತುಗಳನ್ನು ಸನ್ಮಾನಿಸಿ ಕೈಗೊಳ್ಳದೆ ಇರುವವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು