Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:2 - ಕನ್ನಡ ಸಮಕಾಲಿಕ ಅನುವಾದ

2 ಆದರೆ ಅಂಥಾ ಅಪರಾಧಗಳನ್ನು ಮಾಡುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಂಥ ಅಪರಾಧಗಳನ್ನು ಮಾಡುವವರ ಬಗ್ಗೆ ದೇವರು ನೀಡುವ ತೀರ್ಪು ನ್ಯಾಯಬದ್ಧವಾದುದು ಎಂಬುದನ್ನು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದರೆ ಅಂಥವುಗಳನ್ನು ನಡಿಸುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವದೆಂದು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಪರಾಧಗಳನ್ನು ಮಾಡುವ ಜನರಿಗೆ ದೇವರು ತೀರ್ಪು ಮಾಡುತ್ತಾನೆ. ಆತನ ತೀರ್ಪು ನ್ಯಾಯವಾದುದೆಂದು ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅಸ್ಲೆ ಸಗ್ಳೆ ಕರ್‍ತಲ್ಯಾ ಲೊಕಾಂಚ್ಯಾ ವಿಶಯಾತ್ ದೆವ್ ದಿತಲೊ ನಿರ್ನಯ್ ಖರ್‍ಯಾಚ್ಯಾ ಪರ್‍ಕಾರ್ ರ್‍ಹಾತಾ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:2
27 ತಿಳಿವುಗಳ ಹೋಲಿಕೆ  

ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.


ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.


ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ?


ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.


ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.


ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


ಆಗ ಜಲಾಶಯದ ಜಲಗಳ ದೂತನು: “ನೀವು ಇದ್ದವರೂ, ಇರುವವರೂ ಆಗಿರುವ ಪರಿಶುದ್ಧರು. ನೀವು ನೀತಿವಂತರಾಗಿದ್ದೀರಿ. ಏಕೆಂದರೆ, ನೀವು ಇವುಗಳಿಗೆ ನ್ಯಾಯತೀರಿಸುವಿರಿ.


ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಆದರೆ ಇಸ್ರಾಯೇಲ್ ಜನರು, ‘ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಎನ್ನುತ್ತಾರೆ. ಇಸ್ರಾಯೇಲ್ ಜನರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಅನೀತಿಯ ಮಾರ್ಗಗಳಲ್ಲವೇ?


“ಆದರೆ ನೀವು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತೀರಿ. ಇಸ್ರಾಯೇಲ್ ಜನರೇ, ಈಗ ಕೇಳಿರಿ, ನನ್ನ ಮಾರ್ಗವು ಸರಿಯಲ್ಲವೇ? ನಿಜಕ್ಕೂ ನಿಮ್ಮ ಮಾರ್ಗಗಳೇ ಸರಿಯಲ್ಲ.


ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


ನೀವು ನನ್ನ ನ್ಯಾಯವನ್ನೂ ವ್ಯಾಜ್ಯವನ್ನೂ ತೀರಿಸಲು ನೀತಿಯುಳ್ಳ ನ್ಯಾಯಾಧಿಪತಿಯಾಗಿ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೀರಿ.


ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ. ಮನುಷ್ಯನು ನ್ಯಾಯವಿಚಾರಣೆಗೆ ಬರಬೇಕೆಂದು ದೇವರು ಕರೆಯುವ ಅವಶ್ಯಕತೆಯೂ ಇಲ್ಲ.


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.


ಮನುಷ್ಯನೇ, ಅಂಥವುಗಳನ್ನು ನಡೆಸುವವರ ಮೇಲೆ ತೀರ್ಪುಮಾಡುತ್ತಿರುವ ನೀನು ದೇವರ ತೀರ್ಪಿನಿಂದ ತಪ್ಪಿಸಿಕೊಂಡೇನೆಂದು ನೆನಸುತ್ತೀಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು