Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:9 - ಕನ್ನಡ ಸಮಕಾಲಿಕ ಅನುವಾದ

9 ಕೆಟ್ಟದ್ದನ್ನು ನಡೆಸುವ ಪ್ರತಿ ಮನುಷ್ಯನಿಗೆ ಕಷ್ಟವೂ ಸಂಕಟವೂ ಬರುತ್ತವೆ, ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೆಹೂದ್ಯರನ್ನು ಮೊದಲ್ಗೊಂಡು, ಇತರರಿಗೂ ಪಾಪಕೃತ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಕಷ್ಟಸಂಕಟಗಳು ಕಾದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕೆಟ್ಟದ್ದನ್ನು ನಡಿಸುವ ಪ್ರತಿಯೊಬ್ಬ ನರಪ್ರಾಣಿಗೆ ಕಷ್ಟವೂ ಸಂಕಟವೂ ಬರುವವು - ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ ಸಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆಟ್ಟದ್ದನ್ನು ನಡೆಸುವ ಪ್ರತಿಯೊಬ್ಬ ವ್ಯಕ್ತಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಕಷ್ಟಸಂಕಟಗಳನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ವಾಯ್ಟ್ ಅಸಲ್ಲೆ ಕರ್‍ತಲ್ಯಾ ಸಗ್ಳ್ಯಾಕ್ನಿ ಪಯ್ಲೆ ಜುದೆವಾಕ್ನಿ ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ದುಕ್ ಅನಿ ಸಂಕಟ್ ರ್‍ಹಾತಾಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:9
35 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.


ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು


ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?


ಆದರೆ ಒಳ್ಳೆಯದನ್ನು ನಡೆಸುವ ಪ್ರತಿಯೊಬ್ಬನಿಗೆ ಮಹಿಮೆಯೂ ಗೌರವವೂ ಸಮಾಧಾನವೂ ಉಂಟಾಗುತ್ತವೆ. ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ.


ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.


“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


“ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ.


ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


“ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”


ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.


ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು.


ನೀತಿವಂತರ ಅಪೇಕ್ಷೆಯು ಶುಭಕ್ಕಾಸ್ಪದ, ದುಷ್ಟರ ಅಪೇಕ್ಷೆಯು ತೀರ್ಪಿಗೀಡು.


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು