Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:21 - ಕನ್ನಡ ಸಮಕಾಲಿಕ ಅನುವಾದ

21 ಆದರೆ ಈಗ ನಿಯಮವಿಲ್ಲದೆ ದೇವರ ನೀತಿಯು ಪ್ರಕಟವಾಗಿದೆ. ಅದಕ್ಕೆ ನಿಯಮವೂ ಪ್ರವಾದಿಗಳೂ ಸಾಕ್ಷಿಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಈಗಲಾದರೋ ಧರ್ಮಶಾಸ್ತ್ರದ ನೆರವಿಲ್ಲದೆಯೇ ದೇವರಿಂದ ದೊರಕುವ ಸತ್ಸಂಬಂಧವು ಪ್ರಕಟವಾಗಿದೆ. ಇದಕ್ಕೆ ಧರ್ಮಶಾಸ್ತ್ರವೂ ಪ್ರವಾದನಾಗ್ರಂಥವೂ ಸಾಕ್ಷಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಈಗಲಾದರೋ ದೇವರಿಂದ ದೊರಕುವ ನೀತಿಯು ಧರ್ಮಶಾಸ್ತ್ರನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ಅತ್ತಾ ಲೊಕಾಕ್ನಿ ಖಾಯ್ದೆ ನಸ್ತಾನಾ ಭಕ್ತಿವಂತ್ ಮನುನ್ ದಾಕ್ವುನ್ ದಿತಲಿ ವಾಟ್ ದೆವಾನ್ ಅಪ್ನಿಚ್ ದಾಕ್ವುನ್ ದಿಲ್ಯಾನಾಯ್. ಹೆಕಾ ಮೊಯ್ಜೆಚೆ ಖಾಯ್ದೆ ಅನಿ ಪ್ರವಾದಿ ಸೈತ್ ಅಪ್ನಾಚಿ ಸಾಕ್ಷಿ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:21
37 ತಿಳಿವುಗಳ ಹೋಲಿಕೆ  

ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಏಕೆಂದರೆ ನುಸಿಯು ಬಟ್ಟೆಯನ್ನು ತಿನ್ನುವಂತೆ, ಅವರನ್ನು ತಿಂದುಬಿಡುವುದು ಮತ್ತು ಹುಳವು ಅವರನ್ನು ಉಣ್ಣೆಯಂತೆ ತಿನ್ನುವುದು. ಆದರೆ ನನ್ನ ನೀತಿಯು ಶಾಶ್ವತವಾಗಿರುವುದು ಮತ್ತು ನನ್ನ ರಕ್ಷಣೆಯು ತಲತಲಾಂತರಗಳಿಗೂ ಇರುವುದು.


ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ಒಬ್ಬ ಮನುಷ್ಯನ ಅವಿಧೇಯತೆಯಿಂದಾಗಿ ಅನೇಕರು, ಪಾಪಿಗಳು ಆದಂತೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದಾಗಿ ಅನೇಕರು ನೀತಿವಂತರಾಗುವರು.


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ದೇವರು ಮುಂಚಿತವಾಗಿ ಪವಿತ್ರ ವೇದಗಳಲ್ಲಿ ತಮ್ಮ ಪ್ರವಾದಿಗಳ ಮೂಲಕ ವಾಗ್ದಾನಮಾಡಿದ,


ಆದರೆ ನಾವು ರಕ್ಷಣೆ ಹೊಂದಿದ್ದು ನಮ್ಮ ಕರ್ತ ಯೇಸುವಿನ ಕೃಪೆಯಿಂದಲೇ, ಹಾಗೆಯೇ ಅವರೂ ಹೊಂದುವರು ಎಂಬುದು ನಮ್ಮ ನಂಬಿಕೆ,” ಎಂದನು.


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು, ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.


ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.


ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ.


ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅಬ್ರಾಮನು ಯೆಹೋವ ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.


ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ಏಕೆಂದರೆ ನಿಯಮವನ್ನು ಕೈಕೊಳ್ಳುವುದರಿಂದಲೇ. ನಂಬಿಕೆಯಿಂದಲೇ ಒಬ್ಬ ಮನುಷ್ಯನು ನೀತಿವಂತನೆಂದು ನಿರ್ಣಯ ಹೊಂದುತ್ತಾನೆಂದು ಎಣಿಸುತ್ತೇವೆ.


ಮನುಷ್ಯರನ್ನು ದಂಡನಾ ತೀರ್ಪಿಗೆ ಒಳಪಡಿಸುವಂಥ ಸೇವೆಯೇ ಮಹಿಮೆಯುಳ್ಳದ್ದಾಗಿದ್ದರೆ, ನೀತಿವಂತರೆಂದು ನಿರ್ಣಯಿಸುವ ಸೇವೆಯು ಇನ್ನೆಷ್ಟು ಮಹಿಮೆಯುಳ್ಳದ್ದಾಗಿರಬೇಕು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು