Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:31 - ಕನ್ನಡ ಸಮಕಾಲಿಕ ಅನುವಾದ

31 ಹಾಗಾದರೆ, ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. ಹಾಗಾದರೆ, ನಾವು ನಂಬಿಕೆಯ ಮೂಲಕ ನಿಯಮವನ್ನು ನಿರರ್ಥಕಗೊಳಿಸುತ್ತೇವೋ? ಎಂದಿಗೂ ಇಲ್ಲ. ನಾವು ನಿಯಮವನ್ನು ಸ್ಥಿರಪಡಿಸುತ್ತೇವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಹೀಗಿರಲು, ನಂಬಿಕೆಯ ಮಾರ್ಗವನ್ನು ಅನುಸರಿಸುವುದರ ಮೂಲಕ ನಾವು ಧರ್ಮಶಾಸ್ತ್ರವನ್ನು ಅಲ್ಲಗಳೆಯುತ್ತೇವೋ? ಇಲ್ಲ! ನಾವು ಧರ್ಮಶಾಸ್ತ್ರವನ್ನು ಸಮರ್ಥಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಅಶೆ ಮಟ್ಲ್ಯಾರ್, ವಿಶ್ವಾಸಾ ವೈನಾ ಅಮಿ ಖಾಯ್ದೆ ಧುರ್ ಕರುನ್ ಸೊಡ್ತಾಂವ್ ಮನುನ್ ಹೊಲೆ ಕಾಯ್? ನಾ, ಕನ್ನಾಚ್‍ ನಾ; ಹೆಚ್ಯಾ ಬದ್ಲಾಕ್ ಅಮಿ ಖಾಯ್ದೆ ಘಟ್ಟ್ ಕರುನ್ಗೆತ್ ಜಾವ್ಕ್ ಲಾಗ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:31
27 ತಿಳಿವುಗಳ ಹೋಲಿಕೆ  

ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”


“ಮೋಶೆಯ ನಿಯಮವನ್ನಾಗಲಿ, ಪ್ರವಾದನೆಗಳನ್ನಾಗಲಿ ರದ್ದು ಮಾಡುವುದಕ್ಕೆ ನಾನು ಬಂದೆನೆಂದು ಭಾವಿಸಬೇಡಿರಿ; ನಾನು ಅವುಗಳನ್ನು ರದ್ದುಗೊಳಿಸಲು ಬರಲಿಲ್ಲ, ನೆರವೇರಿಸಲು ಬಂದಿದ್ದೇನೆ.


ನಾನು ನಿಯಮ ಇಲ್ಲದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು. ನಾನು ಕ್ರಿಸ್ತ ಯೇಸುವಿನ ನಿಯಮಕ್ಕೆ ಒಳಗಾದವನಾಗಿದ್ದರೂ ನಾನು ದೇವರ ನಿಯಮದಿಂದ ಸ್ವತಂತ್ರವಾದವನಲ್ಲ.


ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.


ಹೀಗೆ ನಾವು ಮಾಂಸಭಾವದವರಾಗಿ ಬಾಳದೆ ಪವಿತ್ರಾತ್ಮರಿಗನುಸಾರವಾಗಿ ಬಾಳುವ ನಮ್ಮಲ್ಲಿ ನಿಯಮದ ಅಗತ್ಯವು ನೆರವೇರುವುದಕ್ಕೆ ಆಸ್ಪದವಾಯಿತು.


“ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.


ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ.


ನಿಯಮಕ್ಕೆ ಒಳಗಾಗುವವರೇ ಬಾಧ್ಯರಾದರೆ, ನಂಬಿಕೆಗೆ ಬೆಲೆಯಿಲ್ಲದಂತಾಯಿತು. ವಾಗ್ದಾನವೂ ನಿರರ್ಥಕ.


ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.”


‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.


ನಿಮ್ಮ ನೀತಿಯು ಫರಿಸಾಯರ ಮತ್ತು ನಿಯಮ ಬೋಧಕರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ, ನೀವು ಪರಲೋಕ ರಾಜ್ಯವನ್ನು ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.


ಯೆಹೋವ ದೇವರು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು. ಆತನು ನಿಯಮವನ್ನು ಹೆಚ್ಚಿಸಿ, ಘನಪಡಿಸುವನು.


ಯೆಹೋವ ದೇವರೇ, ಇದು ನೀವು ಕಾರ್ಯಸಾಧಿಸಲು ಸಮಯವಾಗಿದೆ, ಏಕೆಂದರೆ ನಿಮ್ಮ ನಿಯಮವು ಉಲ್ಲಂಘಿಸಲಾಗಿದೆ.


ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”


ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.


ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೀಯೆಂದು ಧೈರ್ಯವಾಗಿದ್ದೀಯಲ್ಲಾ?


ಎಂದಿಗೂ ಹಾಗೆ ಆಗದಿರಲಿ. ದೇವರು ಅನ್ಯಾಯಗಾರರಾಗಿದ್ದರೆ ಲೋಕಕ್ಕೆ ನ್ಯಾಯತೀರಿಸುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು