Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:15 - ಕನ್ನಡ ಸಮಕಾಲಿಕ ಅನುವಾದ

15 ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಧರ್ಮಶಾಸ್ತ್ರವು ದೇವರ ಕೋಪವನ್ನು ಬರಮಾಡುತ್ತದೆ. ಧರ್ಮಶಾಸ್ತ್ರವೇ ಇಲ್ಲದೆಹೋಗಿದ್ದರೆ ಅದರ ಉಲ್ಲಂಘನೆಯೂ ಇರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಕಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದು. ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಮೀರೋಣವೆಂಬದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖಾಯ್ದೊ ದೆವಾಚ್ಯಾ ರಾಗಾಕ್ ಖಾಲ್ತಿ ಉತ್ರುನ್ ಘೆವ್ನ್ ಯೆತಾ; ಖರೆ ಜೆ ಖಯ್ ಖಾಯ್ದೊಚ್ ನಾ, ಥೈ ಖಾಯ್ದ್ಯಾಚ್ಯಾ ಪರ್‍ಕಾರ್ ಚಲಿನಸಲ್ಲೆ ಮನ್ತಲೆ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:15
26 ತಿಳಿವುಗಳ ಹೋಲಿಕೆ  

ನಿಯಮವು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿ ಇತ್ತು. ಆದರೆ ನಿಯಮವು ಇಲ್ಲದಿದ್ದಾಗ ಪಾಪವು ಲೆಕ್ಕಕ್ಕೆ ಬರುವುದಿಲ್ಲ.


ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.


ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ.


ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು.


ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


ಪಾಪಮಾಡುವ ಪ್ರತಿಯೊಬ್ಬನೂ ನಿಯಮವನ್ನು ಮೀರುವವನಾಗಿದ್ದಾನೆ. ನಿಯಮವನ್ನು ಮೀರುವುದೇ ಪಾಪ.


ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.


ನಾನು ಬಂದು ಅವರೊಂದಿಗೆ ಮಾತನಾಡದಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರ ಪಾಪದ ವಿಷಯವಾಗಿ ಅವರಿಗೆ ನೆಪವಿಲ್ಲ.


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


“ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.


ಇವುಗಳ ನಿಮಿತ್ತ ದೇವರ ಕೋಪವು ಉಂಟಾಗುತ್ತಲಿದೆ.


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ಹಬ್ಬದ ದಿನಕ್ಕೆ ಕರೆಯುವಂತೆಯೇ ನನ್ನ ವಿರುದ್ಧವಾಗಿ ಪ್ರತಿಯೊಂದು ದಿಕ್ಕಿನಲ್ಲಿಯ ವಿರೋಧಿಗಳನ್ನು ಕರೆದಿದ್ದೀರಿ. ಯೆಹೋವ ದೇವರ ಕೋಪದ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಾರರು, ಉಳಿದುಕೊಳ್ಳಲಾರರು. ನಾನು ಬೆಳೆಸಿ ಸಾಕಿದವರನ್ನು ವೈರಿಯು ನಾಶಮಾಡಿದ್ದಾನೆ.


ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.


“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು.


“ನಿಮ್ಮ ಪಿತೃಗಳ ಬದಲಾಗಿ ಬಂದಿರುವ ನೀವು, ಪಾಪಿಗಳಾಗಿ ಇಸ್ರಾಯೇಲ್ ಕುರಿತು ಯೆಹೋವ ದೇವರ ಕೋಪವನ್ನೂ ಮತ್ತಷ್ಟು ಹೆಚ್ಚಿಸುತ್ತಿದ್ದೀರಲ್ಲಾ.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು