Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:16 - ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದಾಗಿರುವಂತೆ ಅದು ನಂಬಿಕೆಯ ಮೂಲಕ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರಮಾಡಿಕೊಂಡವರಿಗೆ ಮಾತ್ರವಲ್ಲದೆ ಅಬ್ರಹಾಮನಲ್ಲಿದ್ದಂಥ ನಂಬಿಕೆಯುಳ್ಳವರಿಗೆ ಸಹ ಸ್ಥಿರವಾಗಿ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:16
18 ತಿಳಿವುಗಳ ಹೋಲಿಕೆ  

ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ.


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಇದರ ಅರ್ಥ, ಶರೀರಸಂಬಂಧದ ಮಕ್ಕಳು ದೇವರ ಮಕ್ಕಳಾಗಿರದೆ ವಾಗ್ದಾನದ ಮಕ್ಕಳೇ ಅಬ್ರಹಾಮನ ಮಕ್ಕಳೆಂದು ಎನಿಸಿಕೊಳ್ಳುವರು ಎಂಬುದು.


ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.


ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.


ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.


ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.


ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.


ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ಯೇಸು ಅವನಿಗೆ, “ಈ ದಿನವೇ ಈ ಮನೆಗೆ ರಕ್ಷಣೆ ಬಂದಿದೆ. ಏಕೆಂದರೆ ಇವನು ಸಹ ಅಬ್ರಹಾಮನ ಪುತ್ರನಲ್ಲವೇ?


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ.


ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.


ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,” ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು