Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:18 - ಕನ್ನಡ ಸಮಕಾಲಿಕ ಅನುವಾದ

18 ಅವನು ತನಗೆ ದೇವರಿಂದ ಹೇಳಲಾದ ನಿರೀಕ್ಷೆಗೆ ಯಾವ ಆಸ್ಪದವು ಇಲ್ಲದಿರುವಾಗಲೂ ನಿರೀಕ್ಷೆಯಿಂದ ನಂಬಿ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಇರುವುದು,” ಎಂಬ ಹೇಳಿಕೆಯಂತೆ ಅವನು ಅನೇಕ ಜನಾಂಗಗಳಿಗೆ ತಂದೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವದು ಎಂಬದಾಗಿ ತನಗೆ ಹೇಳಲ್ಪಟ್ಟ ಮಾತು ನೆರವೇರುವದಕ್ಕೆ ಮಾರ್ಗ ತೋರದೆ ಇರುವದರಿಂದ ಅಬ್ರಹಾಮನು ತಾನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ನಿರೀಕ್ಷಿಸಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಬ್ರಹಾಮನಿಗೆ ಮಕ್ಕಳಾಗುವ ಆಸ್ಪದವೇ ಇರಲಿಲ್ಲ. ಆದರೂ ಅವನು ದೇವರನ್ನು ನಂಬಿ ತನ್ನ ನಿರೀಕ್ಷೆಯಲ್ಲಿಯೇ ಮುಂದುವರೆದನು. ಆದಕಾರಣವೇ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. ದೇವರು ಅವನಿಗೆ, “ನೀನು ಅನೇಕ ಜನಾಂಗಗಳನ್ನು ಪಡೆಯುವೆ” ಎಂದು ಹೇಳಿದ್ದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಬ್ರಾಹಾಮಾನ್ ವಿಶ್ವಾಸ್ ಕರ್‍ಲ್ಯಾನ್ ಅನಿ ಬರೊಸೊ ಥವ್ಲ್ಯಾನ್, ಬರೊಸೊ ಕರುಕ್ ಕಾಯ್ಬಿ ಕಾರನ್ ನತ್ತೊ ಜಾಲ್ಯಾರ್‍ಬಿ ತೆನಿ ಬರೊಸೊ ಥವ್ಲ್ಯಾನ್, ತೆಚೆಸಾಟ್ನಿ ತೊ “ಸುಮಾರ್ ದೆಶಾಂಚೊ ಬಾಬಾ ಹೊಲೊ” ಪವಿತ್ರ್ ಪುಸ್ತಕ್ ಮನ್ತಾ , “ತುಜ್ಯಾ ಪಿಳ್ಗಿಚಿ ಲೊಕಾ ಚಿಕ್ಕಿಯಾಂಚ್ಯಾ ಯೆವ್ಡಿ ರ್‍ಹಾತ್ಯಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:18
12 ತಿಳಿವುಗಳ ಹೋಲಿಕೆ  

ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ?


ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.


ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ.


ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು.


ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’


ಜಕರೀಯನು ಆ ದೇವದೂತನಿಗೆ, “ಇದನ್ನು ನಾನು ಯಾವುದರಿಂದ ತಿಳಿದುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯ ಮೀರಿದವಳು,” ಎಂದನು.


ಅವನು ಆಗಲೇ ಸುಮಾರು ನೂರು ವರ್ಷದವನಾಗಿದ್ದು, ತನ್ನ ದೇಹವು ದುರ್ಬಲವಾಗಿದ್ದರೂ ಹೆಂಡತಿಯಾದ ಸಾರಳಿಗೆ ಗರ್ಭಧರಿಸುವ ಕಾಲ ಮುಗಿದು ಹೋಗಿದ್ದರೂ ನಂಬಿಕೆಯಲ್ಲಿ ಬಲಹೀನನಾಗಲಿಲ್ಲ.


ಈ ನಿರೀಕ್ಷೆಯು ನಮ್ಮ ಆತ್ಮಕ್ಕೆ ನಿಶ್ಚಯವಾದದ್ದೂ ಸ್ಥಿರವಾದದ್ದೂ ಆಗಿರುವ ಲಂಗರದ ಹಾಗಿದೆ. ಅದು ಅತಿ ಪರಿಶುದ್ಧಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು