Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:12 - ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ನೀವು ದೇಹದ ಆಶೆಗಳಿಗೆ ಒಳಗಾಗದಂತೆ ನಿಮ್ಮ ನಶ್ವರ ದೇಹಗಳಲ್ಲಿ ಪಾಪವು ಅಧಿಕಾರ ನಡೆಸಲು ಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪಗಳನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ನೀವು ಭೂಲೋಕದ ಜೀವನದಲ್ಲಿ ಪಾಪಕ್ಕೆ ಅಧೀನರಾಗಿರಬೇಡಿ; ನಿಮ್ಮ ಪಾಪಾಧೀನಸ್ವಭಾವದ ದುರಾಶೆಗಳ ಆಡಳಿತಕ್ಕೆ ಒಳಗಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆಮನುನ್ ತುಮ್ಚ್ಯಾ ನಾಸ್ ಹೊತಲ್ಯಾ ತುಮ್ಚ್ಯಾ ಸದ್ದಿಚ್ಯಾ ಚಾಲಿಕ್ ತುಮಿ ಖಾಲ್ತಿ ಹೊವ್ನ್ ಚಲಿ ಸರ್ಕೆ ಕರ್‍ತಲ್ಯಾ ಪಾಪಾನ್ ಅನಿ ಫಿಡೆ ತುಮ್ಚ್ಯಾ ವರ್‍ತಿ ಅದಿಕಾರ್ ಚಾಲ್ವುಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:12
35 ತಿಳಿವುಗಳ ಹೋಲಿಕೆ  

ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ.


ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.


ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು.


ಏಕೆಂದರೆ ಜೀವಂತವಾಗಿರುವ ನಾವು ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಪ್ರಕಟಿಸುವಂತೆ, ನಮ್ಮನ್ನು ಯಾವಾಗಲೂ ಯೇಸುವಿಗಾಗಿ ಮರಣಕ್ಕೆ ಒಪ್ಪಿಸಿಕೊಟ್ಟವರಾಗಿದ್ದೇವೆ.


ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.


ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.


ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.


ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ನನ್ನ ಹೆಜ್ಜೆಗಳನ್ನು ನಿಮ್ಮ ವಾಕ್ಯದ ಪ್ರಕಾರ ಮುನ್ನಡೆಸಿರಿ; ಯಾವ ಪಾಪವಾದರೂ ನನ್ನನ್ನು ಆಳದಿರಲಿ.


“ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.


“ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅಪೊಸ್ತಲರು ನಿಮಗೆ ಹೇಳಿದರು.


ವಿಧೇಯರಾದ ಮಕ್ಕಳಿಗೆ ತಕ್ಕಂತೆ, ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮ್ಮ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರಬೇಡಿರಿ.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು.


ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.


ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.


ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.


ಆದ್ದರಿಂದ, ‘ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು. ಅವರ ದೇವರುಗಳು ನಿಮಗೆ ಉರುಲಾಗುವುವು,’ ಎಂದು ನಾನು ಹೇಳಿದ್ದೆನು.”


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.


ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ಗುಡಾರವೆಂಬ ಹಳೆಯ ಶರೀರವು ನಮ್ಮಿಂದ ಕಳಚಿ ಹೋಗಬೇಕೆಂಬುದು ನಮ್ಮ ಇಷ್ಟವಲ್ಲ. ಆದರೆ ಪರಲೋಕದ ನಿವಾಸವೆಂಬ ನೂತನ ಶರೀರವನ್ನು ನಾವು ಧರಿಸಿಕೊಳ್ಳಲು ಬಯಸುತ್ತೇವೆ. ಏಕೆಂದರೆ ನಶ್ವರವಾದ ಈ ನಮ್ಮ ದೇಹವು ಅಮರತ್ವವನ್ನು ಧರಿಸಿಕೊಳ್ಳಬೇಕು.


ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.


“ಒಬ್ಬ ಗಂಡಸಿನ ತಲೆಯ ಕೂದಲು ಉದುರಿ ಹೋದರೆ, ಅವನು ಬೋಳು ತಲೆಯವನು. ಆದರೂ ಅವನು ಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು