Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:13 - ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದು ಮಾತ್ರವಲ್ಲದೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು ದುಷ್ಟತ್ವವನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು ನಿಮ್ಮ ಅಂಗಗಳನ್ನು ನೀತಿ ಕೃತ್ಯಗಳನ್ನು ನಡಿಸುವ ಸಾಧನಗಳನ್ನಾಗಿ ಆತನಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದುಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:13
39 ತಿಳಿವುಗಳ ಹೋಲಿಕೆ  

ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.


ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.


ನಿಮ್ಮ ಪಾಪಗಳಿಂದಲೂ ನಿಮ್ಮ ಸುನ್ನತಿಯಿಲ್ಲದ ಪಾಪ ಸ್ವಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತ ಯೇಸುವಿನೊಂದಿಗೆ ಜೀವಿತರನ್ನಾಗಿ ಮಾಡಿ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದರು.


ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ನಿಮ್ಮ ದೇಹಗಳು ಕ್ರಿಸ್ತ ಯೇಸುವಿನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಕ್ರಿಸ್ತ ಯೇಸುವಿನ ಅಂಗಗಳಾಗಿರುವಂಥವುಗಳನ್ನೇ ತೆಗೆದುಕೊಂಡು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಬೇಡ.


ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.


ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.


ನಾವು ಹೋರಾಡುವಾಗ ಉಪಯೋಗಿಸುವ ಆಯುಧಗಳು ಲೋಕದವುಗಳಲ್ಲ. ಅವುಗಳಿಗೆ ಕೋಟೆಗಳನ್ನೇ ಕೆಡವಿ ಹಾಕುವ ದೈವಿಕ ಶಕ್ತಿ ಇದೆ.


ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು.


ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ, ತಮಗಾಗಿ ಸತ್ತು ಪುನರುತ್ಥಾನವಾಗಿ ಬಂದ ಕ್ರಿಸ್ತ ಯೇಸುವಿಗೋಸ್ಕರವೇ ಜೀವಿಸಬೇಕೆಂದು ಕ್ರಿಸ್ತ ಯೇಸು ಎಲ್ಲರಿಗೋಸ್ಕರ ಸತ್ತರು.


ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ.


ಆದರೆ ಈ ನಿನ್ನ ತಮ್ಮ ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಉಲ್ಲಾಸಪಟ್ಟು ಆನಂದಪಡುವುದು ಯುಕ್ತವಾದದ್ದೇ ಎಂದು ಹೇಳಿದನು.’ ”


ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ?


ಅವರು ಸಕಲ ವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ, ದುಷ್ಟತ್ವ, ಹೊಟ್ಟೆಕಿಚ್ಚು, ಕೊಲೆ, ಜಗಳ, ಕಪಟ, ಹಗೆತನಗಳಿಂದಲೂ ತುಂಬಿದವರಾದರು.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ಏಕೆಂದರೆ ಈ ನನ್ನ ಮಗನು ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ,’ ಎಂದು ಹೇಳಿದನು. ಹೀಗೆ ಅವರು ಅವನ ಬರುವಿಕೆಯನ್ನು ಆಚರಿಸತೊಡಗಿದರು.


ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.


ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ, ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.


ನೀತಿವಂತನ ಬಾಯಿ ಜ್ಞಾನವನ್ನು ನುಡಿಯುವುದು; ಅವನ ನಾಲಿಗೆ ನ್ಯಾಯವನ್ನು ಮಾತನಾಡುವುದು.


ಅಂಥ ಅನ್ಯಾಯ ಮಾಡುವವರೆಲ್ಲರೂ ನಿನ್ನ ದೇವರಾದ ಯೆಹೋವ ದೇವರಿಗೆ ಅಸಹ್ಯ.


ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಿಸುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಗುರಿಯಾಗುವರು.


ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು.


ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು