Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:21 - ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅತ್ತಾ ತುಮ್ಕಾ ಲಜ್ಜಾ ದಿಸಿ ಸರ್ಕೆ ಕರ್‍ತಲ್ಯಾ ತ್ಯಾ ತುಮಿ ಕರಲ್ಲ್ಯಾ ಕಾಮಾಂಚ್ಯಾ ವೈನಾ ತುಮ್ಕಾ ಕಾಯ್ ಗಾವ್ಲೆ? ತ್ಯಾ ಕಾಮಾಂಚೊ ಪ್ರತಿಪಳ್ ಮರಾನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:21
46 ತಿಳಿವುಗಳ ಹೋಲಿಕೆ  

ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ.


ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಮನುಷ್ಯ ದೃಷ್ಟಿಗೆ ಸರಿ ತೋರುವ ಒಂದು ಮಾರ್ಗವಿದೆ, ಆದರೆ ಅದರ ಅಂತ್ಯವು ಮರಣದ ಮಾರ್ಗಗಳೇ.


ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ನಿಷ್ಪ್ರಯೋಜಕವಾದದ್ದಾಗಿ ಶಾಪಕ್ಕೆ ಗುರಿಯಾಗಿ, ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.


ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.


ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ಅವನು ಆ ಪಾಪ ಮಾಡಿದವನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ, ಅವನ ಆತ್ಮವನ್ನು ಮರಣದಿಂದಲೂ ತಪ್ಪಿಸಿ, ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲಿ.


ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.


ಅವರು ಮಾಡಿದ ಎಲ್ಲದಕ್ಕಾಗಿ ನಾಚಿಕೆಪಟ್ಟರೆ, ದೇವಾಲಯದ ರೂಪವನ್ನೂ, ಅದರ ಆಕಾರವನ್ನೂ, ಅದರ ಆಗಮನ ನಿರ್ಗಮನಗಳನ್ನೂ, ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ಕಟ್ಟಳೆಗಳನ್ನೂ ಅವರಿಗೆ ವಿವರಿಸು. ಅವರು ಅದರ ರಚನಾವಿಧಾನಗಳಿಗೆ ನಂಬಿಗಸ್ತರಾಗಿರುವಂತೆಯೂ ಅವರು ಅದರ ಎಲ್ಲಾ ಕಟ್ಟಳೆಗಳನ್ನೂ ಅನುಸರಿಸುವಂತೆಯೂ ಅವರ ಮುಂದೆಯೇ ಇವುಗಳನ್ನು ಬರೆ.


ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’


ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.


ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.


ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ.


ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ, ತಮ್ಮ ಸ್ವಂತ ಕುಯುಕ್ತಿಗಳಿಂದಲೇ ಹೊಟ್ಟೆ ತುಂಬಿಕೊಳ್ಳುವರು.


ನಾನು ದೇವರ ಪರಿಶುದ್ಧ ಆಲಯಕ್ಕೆ ಬರುವವರೆಗೆ ನನಗೆ ಅರ್ಥವಾಗಲಿಲ್ಲ. ಅನಂತರ ಅವರ ಅಂತ್ಯವನ್ನು ನನಗೆ ಅರ್ಥವಾಯಿತು.


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


“ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ.


ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು.


ಒಬ್ಬನು ಮರಣದಂಡನೆಗೆ ಯೋಗ್ಯವಾದ ಅಪರಾಧ ಮಾಡಿದ್ದರಿಂದ, ನೀವು ಅವನಿಗೆ ಮರಣದಂಡನೆಯನ್ನು ವಿಧಿಸಿ, ಅವನ ಶವವನ್ನು ಮರಕ್ಕೆ ತೂಗುಹಾಕಿದ್ದಾದರೆ,


ಒಬ್ಬನ ಸಾಕ್ಷಿಯ ಮಾತಿನಿಂದ ಮಾತ್ರ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಸಾಕ್ಷಿಗಳು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. ದೇವರು ಮುಯ್ಯಿತೀರಿಸಲಿಲ್ಲ,


ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು.


ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು