Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:5 - ಕನ್ನಡ ಸಮಕಾಲಿಕ ಅನುವಾದ

5 ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನ ಆದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೇಗಂದರೆ ನಾವು ಆತನ ಮರಣಕ್ಕೆ ಸದೃಶವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕ್ರಿಸ್ತನ ಮರಣಕ್ಕೆ ಸದೃಶ್ಯವಾದ ಮರಣದ ಮೂಲಕ ನಾವು ಸಹ ಆತನೊಂದಿಗೆ ಐಕ್ಯರಾದೆವು. ಆದ್ದರಿಂದ ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಸಹ ಜೀವಂತವಾಗಿ ಎದ್ದುಬರುವುದರ ಮೂಲಕವಾಗಿ ಆತನೊಂದಿಗೆ ಐಕ್ಯರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್ ಕಶೆ ತೆಚ್ಯಾ ಮರ್ತಲ್ಯಾತ್ ಅಮಿ ತೆಚ್ಯಾ ವಾಂಗ್ಡಾ ಎಕ್ ಹೊಲಾಂವ್, ತಸೆಚ್ ಅಮಿ ತೆಚ್ಯಾ ಝಿತ್ತೊ ಹೊವ್ನ್ ಉಟ್ತ್ಯಾಲಾತ್ಬಿ ತೆಚೆ ವಾಂಗ್ಡಾ ಎಕ್ ಹೊತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:5
12 ತಿಳಿವುಗಳ ಹೋಲಿಕೆ  

ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.


ಯೇಸುವಿನ ಜೀವವು ನಮ್ಮ ಶರೀರದಲ್ಲಿ ಪ್ರಕಟವಾಗುವಂತೆ, ನಾವು ಯಾವಾಗಲೂ ನಮ್ಮ ಶರೀರದಲ್ಲಿ ಯೇಸುವಿನ ಮರಣವನ್ನು ಧರಿಸುವವರಾಗಿರುತ್ತೇವೆ.


ನೀವು ಕ್ರಿಸ್ತನೊಂದಿಗೆ ಜೀವಂತವಾಗಿ ಎದ್ದವರಾಗಿದ್ದರೆ, ಮೇಲಿರುವವುಗಳನ್ನೇ ಹುಡುಕಿರಿ. ಅಲ್ಲಿ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಪರಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊಂದು ಗಿಡವು ಬೇರುಸಹಿತವಾಗಿ ಕಿತ್ತುಹಾಕಲಾಗುವುದು.


ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಅವನು ಅದಕ್ಕೆ ಬೇಲಿಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿ ಸಸಿಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷಿ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಬಿಟ್ಟಿತು.


ಅವರು ಯೆಹೋವ ದೇವರ ಆಲಯದಲ್ಲಿ ನೆಟ್ಟ ಸಸಿಗಳಂತಿರುವರು. ನಮ್ಮ ದೇವರ ಅಂಗಳಗಳಲ್ಲಿ ಅವರು ವೃದ್ಧಿ ಆಗುವರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು