Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:18 - ಕನ್ನಡ ಸಮಕಾಲಿಕ ಅನುವಾದ

18 ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯತನವೆಂಬುದೇನೂ ನೆಲೆಗೊಂಡಿಲ್ಲ. ಇದು ನನಗೆ ಗೊತ್ತು. ಏಕೆಂದರೆ, ಒಳಿತನ್ನು ಮಾಡಬೇಕೆಂಬ ಮನಸ್ಸು ನನಗಿದ್ದರೂ ಅದನ್ನು ಮಾಡಲು ನನ್ನಿಂದ ಆಗುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೇದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ. ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೌದು, ನನ್ನಲ್ಲಿ ಅಂದರೆ ನನ್ನ ಪಾಪಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂಬುದು ನನಗೆ ಗೊತ್ತಿದೆ. ಒಳ್ಳೆಯ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಮನಸ್ಸಿದ್ದರೂ ಅವುಗಳನ್ನು ಕಾರ್ಯಗತಗೊಳಿಸಲು ನನಗೆ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಬರೆ ಮಾಜ್ಯಾ ಭುತ್ತುರ್ ರ್‍ಹಾಯ್ನಾ ಮನುನ್ ಮಾಕಾ ಗೊತ್ತ್ ಹಾಯ್, ತೆ ಮಾಜ್ಯಾ ಮಾನುಸ್‍ ಪಾನಾಚ್ಯಾ ಸ್ವಬಾವಾತ್ ಹಾಯ್. ಕಶ್ಯಾಕ್ ಮಟ್ಲ್ಯಾರ್ ಬರೆ ಕರುಚೆ ಮನ್ತಲಿ ಆಶ್ಯಾ ಮಾಜ್ಯಾ ಭುತ್ತುರ್ ರ್‍ಹಾಲ್ಯಾರ್‍ಬಿ, ಮಾಜ್ಯಾನ್ ತೆ ಕರುಕ್ ಹೊಯ್ನಾ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:18
31 ತಿಳಿವುಗಳ ಹೋಲಿಕೆ  

ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.


ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.


ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.


ಅಶುದ್ಧತೆಯಿಂದ ಶುದ್ಧವಾದದ್ದನ್ನು ತರುವವನು ಯಾರು? ಯಾರೂ ತರಲಾರರು!


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಮಾಡಲು ಬಯಸದೆ ಇರುವ ಕೆಟ್ಟದ್ದನ್ನೇ ಮಾಡುತ್ತಿದ್ದೇನೆ.


ನಾನು ಏನು ಮಾಡುತ್ತೇನೆ ಎಂಬುದನ್ನು ತಿಳಿಯದವನಾಗಿದ್ದೇನೆ. ಏಕೆಂದರೆ ನಾನು ಮಾಡಬೇಕೆಂದು ಬಯಸುವುದನ್ನು ಮಾಡದೆ, ಯಾವುದನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುವವನಾಗಿದ್ದೇನೆ.


ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.


ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.


ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.


ತಪ್ಪಿಹೋದ ಕುರಿಯಂತೆ ನಾನು ದಾರಿತಪ್ಪಿದ್ದೇನೆ. ನಿಮ್ಮ ಸೇವಕನಾದ ನನ್ನನ್ನು ಬಂದು ಹುಡುಕಿರಿ, ಏಕೆಂದರೆ ನಿಮ್ಮ ಆಜ್ಞೆಗಳನ್ನು ನಾನು ಮರೆಯುವುದಿಲ್ಲ.


ಇಗೋ ನಿಮ್ಮ ಸೂತ್ರಗಳಿಗಾಗಿ ನಾನು ಎಷ್ಟೋ ಹಂಬಲಿಸುತ್ತೇನೆ! ನಿಮ್ಮ ನೀತಿಗನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ.


ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ?


ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.


ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.


ನಾನು ನಿಮ್ಮ ಸೂತ್ರಗಳನ್ನು ಆರಿಸಿಕೊಂಡಿರುವುದರಿಂದ, ನಿಮ್ಮ ಕೈ ನನಗೆ ನೆರವಾಗಲಿ.


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಿಮ್ಮ ತೀರ್ಪುಗಳನ್ನು ಪಾಲಿಸುವುದರಲ್ಲಿ ನನ್ನ ಮಾರ್ಗಗಳು ಸ್ಥಿರವಾಗಿರಲಿ!


ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ಓಡುವೆನು, ಏಕೆಂದರೆ ನೀವು ನನ್ನ ವಿವೇಕವನ್ನು ವಿಸ್ತಾರ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು