Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:21 - ಕನ್ನಡ ಸಮಕಾಲಿಕ ಅನುವಾದ

21 ಒಳ್ಳೆಯದನ್ನು ಮಾಡಲು ಬಯಸುತ್ತಿರುವ ನನ್ನಲ್ಲಿ ಕೆಟ್ಟದ್ದು ಇರುವ ನಿಯಮವನ್ನು ಕಾಣುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನು ಒಳಿತನ್ನು ಮಾಡಬಯಸಿದರೂ ಕೇಡು ನನ್ನ ಕೈಬಿಡುತ್ತಿಲ್ಲ. ಇದೇ ಒಂದು ನಿಯಮವಾಗಿ ನನ್ನಲ್ಲಿ ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗಿರಲಾಗಿ ಒಳ್ಳೇದನ್ನು ಮಾಡಬೇಕೆಂದಿರುವ ನನಗೆ ಕೆಟ್ಟದ್ದೇ ಸಿದ್ಧವಾಗಿದೆಯೆಂಬ ನಿಯಮ ನನಗೆ ಕಾಣಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀಗಿರಲಾಗಿ, ನಾನು ಈ ನಿಯಮವನ್ನು ಕಲಿತುಕೊಂಡಿದ್ದೇನೆ: ನಾನು ಒಳ್ಳೆಯದನ್ನು ಮಾಡಲಿಚ್ಛಿಸುವಾಗ, ಕೆಟ್ಟದ್ದು ನನ್ನೊಳಗೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅಶೆ ಮಿಯಾ ಬರೆ ಕರುಕ್ ಜಾತಾನಾ ಸಗ್ಳೆ ಬುರ್ಶೆಚ್ ಕರುಲ್ಲಾ ಮನ್ತಾನಾ ಹ್ಯೊ ಖಾಯ್ದೊ ಮಾಕಾ ಲಾಗು ಹೊತಾ ಮನುನ್ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:21
19 ತಿಳಿವುಗಳ ಹೋಲಿಕೆ  

ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಆದ್ದರಿಂದ ನೀವು ದೇಹದ ಆಶೆಗಳಿಗೆ ಒಳಗಾಗದಂತೆ ನಿಮ್ಮ ನಶ್ವರ ದೇಹಗಳಲ್ಲಿ ಪಾಪವು ಅಧಿಕಾರ ನಡೆಸಲು ಬಿಡಬೇಡಿರಿ.


ನನ್ನ ಹೆಜ್ಜೆಗಳನ್ನು ನಿಮ್ಮ ವಾಕ್ಯದ ಪ್ರಕಾರ ಮುನ್ನಡೆಸಿರಿ; ಯಾವ ಪಾಪವಾದರೂ ನನ್ನನ್ನು ಆಳದಿರಲಿ.


ಇಂಥವರು ಸ್ವಾತಂತ್ರ್ಯಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ. ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತು ಹೋಗಿರುವನೋ, ಅವನು ಅದರ ದಾಸತ್ವದೊಳಗಿರುವನಷ್ಟೆ.


ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ಅದಕ್ಕೆ ಯೇಸು ಉತ್ತರವಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರು ಪಾಪಕ್ಕೆ ಗುಲಾಮರಾಗಿದ್ದಾರೆ.


ವ್ಯರ್ಥವಾದವುಗಳಿಂದ ನನ್ನ ಕಣ್ಣುಗಳನ್ನು ತಿರುಗಿಸಿ, ನಿಮ್ಮ ವಾಕ್ಯದ ಅನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ.


ಯೇಸು ಪವಿತ್ರಾತ್ಮಭರಿತರಾಗಿ, ಯೊರ್ದನ್ ನದಿ ತೀರದಿಂದ ಹಿಂದಿರುಗಿ ಬಂದು, ದೇವರಾತ್ಮರಿಂದ ಅರಣ್ಯದೊಳಕ್ಕೆ ಮಾರ್ಗದರ್ಶನ ಹೊಂದಿ,


ನಾವು ನಮ್ಮ ಪಾಪಗಳಿಂದ ತುಂಬಿಹೋಗಿರುವಾಗ ನೀವೇ ನಮ್ಮ ದ್ರೋಹಗಳಿಗಾಗಿ ದೋಷಪರಿಹಾರಕರು.


ಲೆಕ್ಕವಿಲ್ಲದಷ್ಟು ಕೇಡುಗಳು ನನ್ನನ್ನು ಸುತ್ತಿಕೊಂಡಿವೆ. ನಾನು ಏನೂ ನೋಡಲಾರದಷ್ಟು ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿವೆ; ನನ್ನ ಪಾಪಗಳು ತಲೆಯ ಕೂದಲುಗಳಿಗಿಂತ ಹೆಚ್ಚಾಗಿವೆ, ಆದ್ದರಿಂದ ನನ್ನ ಹೃದಯವು ಕುಂದಿಹೋಗಿದೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು