Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:5 - ಕನ್ನಡ ಸಮಕಾಲಿಕ ಅನುವಾದ

5 ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾವು ಶರೀರ ಸ್ವಭಾವಕ್ಕನುಸಾರವಾಗಿ ಬಾಳುತ್ತಿದ್ದಾಗ ಪಾಪಕರವಾದ ದುರಿಚ್ಛೆಗಳು ಧರ್ಮಶಾಸ್ತ್ರದಿಂದಲೇ ಪ್ರಚೋದಿತವಾಗಿ ನಮ್ಮ ಇಂದ್ರಿಯಗಳಲ್ಲಿ ಕಾರ್ಯನಿರತವಾಗಿದ್ದವು. ಪರಿಣಾಮವಾಗಿ, ನಾವು ಮೃತ್ಯುವಿಗೆ ಫಲವನ್ನು ಈಯುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾವು ಶರೀರಾಧೀನಸ್ವಭಾವವನ್ನು ಅನುಸರಿಸುತ್ತಿದ್ದಾಗ ದುರಾಶೆಗಳು ಧರ್ಮಶಾಸ್ತ್ರದಿಂದಲೇ ಪ್ರೇರಿತವಾಗಿ ನಮ್ಮ ಅಂಗಗಳಲ್ಲಿ ಯತ್ನೈಸುತ್ತಾ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹಿಂದಿನ ಕಾಲದಲ್ಲಿ, ನಮ್ಮ ಪಾಪಾಧೀನಸ್ವಭಾವವು ನಮ್ಮನ್ನು ಆಳುತ್ತಿತ್ತು. ಪಾಪಕೃತ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಧರ್ಮಶಾಸ್ತ್ರವು ನಮ್ಮಲ್ಲಿ ಉಂಟುಮಾಡಿತು. ಮತ್ತು ನಾವು ಮಾಡಲಿಚ್ಛಿಸಿದ್ದ ಆ ಪಾಪಕೃತ್ಯಗಳು ನಮ್ಮ ದೇಹಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡವು. ಇದರಿಂದಾಗಿ, ನಾವು ಮಾಡಿದ ಕಾರ್ಯಗಳೆಲ್ಲ ನಮಗೆ ಆತ್ಮಿಕ ಮರಣವನ್ನು ಮಾತ್ರ ಉಂಟು ಮಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾಚ್ ಸ್ವಬಾವಾಚ್ಯಾ ಸರ್ಕೆ ಚಲುನ್ಗೆತ್ ಹೊತ್ತಾಂವ್ ತನ್ನಾ ಖಾಯ್ದ್ಯಾಚ್ಯಾ ವೈನಾ ವೈರ್ ಉಟಲ್ಲ್ಯಾ ಪಾಪಾಕ್ ವೊಡ್ತಲ್ಯಾ ಗೊಸ್ಟಿಯಾ ಅಮ್ಚ್ಯಾ ಆಂಗಾತ್ನಿ ಗುಸುನ್ ಕಾಮ್ ಕರಿತ್; ಅನಿ ಹೆಚ್ಯಾ ವೈನಾಚ್ ಅಮಿ ಮರ್ನಾತ್ ಜಾವ್ನ್ ಪಾವಲ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:5
28 ತಿಳಿವುಗಳ ಹೋಲಿಕೆ  

ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.


ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ಪಾಪಮಾಡುವ ಪ್ರತಿಯೊಬ್ಬನೂ ನಿಯಮವನ್ನು ಮೀರುವವನಾಗಿದ್ದಾನೆ. ನಿಯಮವನ್ನು ಮೀರುವುದೇ ಪಾಪ.


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ.


ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ?


ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ.


ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.


ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗೆ ಒಪ್ಪಿಸಿಬಿಟ್ಟರು. ಹೇಗೆಂದರೆ ಅವರ ಸ್ತ್ರೀಯರು ಸಹ ಸ್ವಾಭಾವಿಕವಾದ ಭೋಗವನ್ನು ಬಿಟ್ಟು, ಅಸ್ವಾಭಾವಿಕವಾದದ್ದನ್ನು ಅನುಸರಿಸಿದರು.


ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.


ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.


ನಾವು ಈ ಲೋಕದಲ್ಲಿ ಜೀವಿಸುವವರಾದರೂ, ನಾವು ಲೋಕದವರಂತೆ ಹೋರಾಟ ಮಾಡುವವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು