Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:6 - ಕನ್ನಡ ಸಮಕಾಲಿಕ ಅನುವಾದ

6 ಈಗಲಾದರೋ ಒಂದು ಕಾಲದಲ್ಲಿ ನಮ್ಮನ್ನು ಯಾವುದು ಬಂಧನದಲ್ಲಿರಿಸಿತ್ತೋ ಅದಕ್ಕೆ ಸತ್ತವರಾಗಿದ್ದು ನಿಯಮದಿಂದ ಬಿಡುಗಡೆ ಹೊಂದಿದವರಾಗಿರುತ್ತೇವೆ. ಹೀಗೆ ನಾವು ಲಿಖಿತವಾದ ಹಳೆಯ ನಿಯಮದಂತೆ ನಡೆಯದೆ ಆತ್ಮದಿಂದ ನವಜೀವನದಲ್ಲಿ ನಡೆಯುವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈಗಲಾದರೋ ನಮ್ಮನ್ನು ಬಂಧನದಲ್ಲಿಟ್ಟಿದ್ದ ಆ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತು, ಬಿಡುಗಡೆ ಹೊಂದಿದ್ದೇವೆ. ಆದ್ದರಿಂದ ಲಿಖಿತವಾದ ಹಳೆಯ ಶಾಸ್ತ್ರಕ್ಕೆ ಬದ್ಧರಾಗದೆ ಪವಿತ್ರಾತ್ಮಪ್ರೇರಿತವಾದ ನವೀನ ಮಾರ್ಗದಲ್ಲಿ ನಡೆಯುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈಗಲಾದರೋ ನಮ್ಮನ್ನು ವಶಮಾಡಿಕೊಂಡಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತಕಾರಣ ಆ ಧರ್ಮಶಾಸ್ತ್ರದಿಂದ ವಿಮುಕ್ತರಾಗಿದ್ದೇವೆ. ಹೀಗಿರಲಾಗಿ ಶಾಸ್ತ್ರದ ಹೊರಗಣ ಅರ್ಥಕ್ಕೆ ಅನುಕೂಲವಾದ ಹಳೇ ರೀತಿಯಲ್ಲಿ ನಾವು ದೇವರನ್ನು ಸೇವಿಸುವವರಲ್ಲ. ಪವಿತ್ರಾತ್ಮಪ್ರೇರಿತವಾದ ಹೊಸ ರೀತಿಯಲ್ಲಿ ಆತನನ್ನು ಸೇವಿಸುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಿಂದಿನ ಕಾಲದಲ್ಲಿ, ಧರ್ಮಶಾಸ್ತ್ರವು ನಮ್ಮನ್ನು ಸೆರೆಯಾಳುಗಳಂತೆ ಬಂಧಿಸಿತ್ತು. ಆದರೆ ನಮ್ಮ ಹಳೆಯ ಸ್ವಭಾವವು ಸತ್ತುಹೋದ ಕಾರಣ ನಾವು ಧರ್ಮಶಾಸ್ತ್ರದಿಂದ ಬಿಡುಗಡೆಯಾದೆವು. ಆದ್ದರಿಂದ ಈಗ ನಾವು ಲಿಖಿತ ನಿಯಮಗಳೊಡನೆ ಹಳೇ ರೀತಿಯಲ್ಲಿ ದೇವರ ಸೇವೆಮಾಡದೆ ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ದೇವರ ಸೇವೆ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅತ್ತಾ ಕಶೆ ತರ್ ಹೊಯ್ನಾ, ಅಮಿ ಖಾಯ್ಧ್ಯಾತ್ನಾ ಸ್ವತಂತ್ರ್, ಹಾಂವ್, ಕಶ್ಯಾಕ್ ಮಟ್ಲ್ಯಾರ್ ಅಮ್ಕಾ ಅದ್ದಿ ಧರುನ್ ಅಪ್ನಾಚ್ಯಾ ಬಂಧಿಖಾನ್ಯಾತ್ ಥವಲ್ಲ್ಯಾ ಖಾಯ್ದ್ಯಾಕ್ ಅಮಿ ಮರ್ಲಾಂವ್, ತೆಚೆಸಾಟ್ನಿ ಅನಿ ಫಿಡೆ ಅಮಿ ಲಿವಲ್ಲ್ಯಾ ಖಾಯ್ಧ್ಯಾಚ್ಯಾ ಪರ್‍ಕಾರ್ ನ್ಹಯ್, ಪವಿತ್ರ್ ಆತ್ಮ್ಯಾಚ್ಯಾ ನ್ಹವ್ಯಾ ವಾಟೆಚ್ಯಾ ಪರ್‍ಕಾರ್ ದೆವಾಚಿ ಸೆವಾ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:6
24 ತಿಳಿವುಗಳ ಹೋಲಿಕೆ  

ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ.


ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.


ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ.


ಸುನ್ನತಿಯಾಗುವುದರಿಂದ ಇಲ್ಲವೆ, ಸುನ್ನತಿಯಾಗದೆ ಇರುವುದರಿಂದ ಏನೂ ಪ್ರಯೋಜನವಿಲ್ಲ. ಆದರೆ ಹೊಸ ಸೃಷ್ಟಿಯೇ ಬೇಕು.


ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.


ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.


ಪ್ರಿಯರೇ, ನಿಯಮವನ್ನು ತಿಳಿದವರಿಗೆ ನಾನು ಹೇಳುವುದೇನೆಂದರೆ, ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ನಿಯಮಕ್ಕೆ ಅವನ ಮೇಲೆ ಅಧಿಕಾರ ಇರುತ್ತದೆಂದು ನೀವು ಬಲ್ಲಿರಿ.


ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ?


ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.


ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ.


ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.


ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.


ಒಬ್ಬ ಮದುವೆಯಾದ ಹೆಣ್ಣು ಮಗಳು ಕಾನೂನಿಗನುಸಾರವಾಗಿ ಅವಳ ಪತಿಯು ಜೀವದಿಂದಿರುವ ತನಕ ಮಾತ್ರ ಅವನಿಗೆ ಬದ್ಧಳಾಗಿರುತ್ತಾಳೆ. ಆದರೆ ಪತಿಯು ಸತ್ತರೆ ಆಕೆಯು ಮದುವೆಯ ಕಾನೂನಿನಿಂದ ಬಿಡುಗಡೆ ಹೊಂದಿದವಳಾಗಿರುತ್ತಾಳೆ.


ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು