Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ಪಾಪವು, ಆ ಆಜ್ಞೆಯಿಂದ ಅನುಕೂಲ ಹೊಂದಿ ನನ್ನಲ್ಲಿ ಎಲ್ಲಾ ವಿಧದ ಆಶೆಗಳನ್ನು ಉಂಟುಮಾಡಿತು. ಏಕೆಂದರೆ ನಿಯಮವಿಲ್ಲದೆ ಪಾಪವು ಸತ್ತದ್ದಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಈ ಆಜ್ಞೆಯ ಮೂಲಕ ಪಾಪವು ಸಮಯ ಸಾಧಿಸಿ ನನ್ನಲ್ಲಿ ಎಲ್ಲಾ ವಿಧದ ದುರಾಶೆಗಳನ್ನು ಕೆರಳಿಸಿತು. ಧರ್ಮಶಾಸ್ತ್ರವಿಲ್ಲದೆ ಇದ್ದರೆ ಪಾಪವು ಸತ್ತಂತೆಯೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಅಚೇತನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಪಾಪವು ಆ ಆಜ್ಞೆಯನ್ನೇ ಬಳಸಿಕೊಂಡು ನನ್ನಲ್ಲಿ ಎಲ್ಲಾ ಬಗೆಯ ದುರಾಶೆಗಳನ್ನು ಕೆರಳಿಸಿತು. ಆದ್ದರಿಂದ ಆ ಆಜ್ಞೆಯಿಂದಾಗಿ ಪಾಪವು ನನ್ನ ಬಳಿಗೆ ಬಂದಿತು. ಆದರೆ ಧರ್ಮಶಾಸ್ತ್ರವಿಲ್ಲದಿದ್ದರೆ, ಪಾಪಕ್ಕೆ ಅಧಿಕಾರವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಹ್ಯಾ ಖಾಯ್ದ್ಯಾಚ್ಯಾ ವೈನಾ ಪಾಪಾನ್ ಮಾಜ್ಯಾ ಭುತ್ತುರ್ ಸಗ್ಳ್ಯಾ ರಿತಿಚ್ಯಾ ಬುರ್ಶ್ಯಾ ಆಶಾ ಉಟಿ ಸರ್ಕೆ ಕರ್‍ಲ್ಯಾನ್. ಖಾಯ್ದೊಚ್ ನಸ್ಲ್ಯಾರ್, ಪಾಪ್ ಎಕ್ ಮರಲ್ಲೆ ವಿಶಯ್ ಹೊವ್ನ್ ರ್‍ಹಾಯ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:8
12 ತಿಳಿವುಗಳ ಹೋಲಿಕೆ  

ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ, ಅದೇ ನನ್ನನ್ನು ಮರಣಕ್ಕೆ ಒಳಪಡಿಸಿತು.


ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ.


ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.


ಹಾಗಾದರೆ ಒಳ್ಳೆಯದಾಗಿರುವ ನಿಯಮವೇ ನನಗೆ ಮರಣಕ್ಕೆ ಕಾರಣವಾಯಿತೋ? ಎಂದಿಗೂ ಇಲ್ಲ! ಆದರೂ ಪಾಪವು ಪಾಪವೇ ಎಂದು ಕಾಣುವಂತೆ ಒಳ್ಳೆಯದಾಗಿರುವ ನಿಯಮದ ಮೂಲಕವೇ ಪಾಪವು ನನ್ನಲ್ಲಿ ಮರಣವು ಉಂಟಾಗುವಂತೆ ಮಾಡಿತು. ಈ ರೀತಿಯಾಗಿ ಆಜ್ಞೆಯ ಮೂಲಕ ಪಾಪವು ಘೋರವಾದದ್ದೇ ಎಂದು ಕಂಡುಬರಲು ಸಾಧ್ಯವಾಯಿತು.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ನಾನು ಬಂದು ಅವರೊಂದಿಗೆ ಮಾತನಾಡದಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರ ಪಾಪದ ವಿಷಯವಾಗಿ ಅವರಿಗೆ ನೆಪವಿಲ್ಲ.


ಹೀಗಿರಲಾಗಿ ನಾನು ಬಯಸದಿರುವುದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಸಿರುವ ಪಾಪವೇ ಅದನ್ನು ಮಾಡುತ್ತದೆ.


ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.


ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ.


ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ಒಮ್ಮೆ ನಾನು ನಿಯಮವಿಲ್ಲದೆ ಜೀವಿಸುತ್ತಿದ್ದೆನು. ಆದರೆ ಯಾವಾಗ ಆಜ್ಞೆಯು ಬಂದಿತೋ ಆಗ ಪಾಪವು ಜೀವಂತವಾಯಿತು, ನಾನು ಸತ್ತವನಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು