Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:17 - ಕನ್ನಡ ಸಮಕಾಲಿಕ ಅನುವಾದ

17 ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಮಿ ತೆಚಿ ಪೊರಾ ಹೊಯ್ ಹೊಲ್ಯಾರ್, ತೆನಿ ಅಪ್ನಾಚ್ಯಾ ಲೊಕಾಕ್ನಿ ಮನುನ್ ಥವಲ್ಲ್ಯಾ ಆಶಿರ್ವಾದಾಚ್ಯಾ ಆಸ್ತಿಚೆ ವಾರಿಸ್ದಾರಿಬಿ ಹೊತಾಂವ್, ಕಶ್ಯಾಕ್ ಮಟ್ಲ್ಯಾರ್ ಅಮಿ ಕ್ರಿಸ್ತಾಚ್ಯಾ ಕಸ್ಟಾತ್ನಿ ಭಾಗ್ ಘೆಟ್ಲಾಂವ್ ತರ್ ತೆಚ್ಯಾ ಮಹಿಮೆತ್‍ಬಿ ಭಾಗ್ ಘೆತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:17
35 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ ಪುತ್ರನಾಗಿದ್ದೀ. ನೀನು ದೇವರ ಮಗು ಎಂದ ಮೇಲೆ ದೇವರ ಮೂಲಕ ವಾರಸುದಾರನೂ ಆಗಿದ್ದೀ.


ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.


ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.


ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು.


ನೀವು ಕ್ರಿಸ್ತ ಯೇಸುವಿನ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ಸಂತೋಷವುಳ್ಳವರಾಗಿರಿ. ಆಗ ಕ್ರಿಸ್ತ ಯೇಸುವಿನ ಮಹಿಮೆಯ ಪ್ರತ್ಯಕ್ಷತೆಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.


ಈ ನಿರೀಕ್ಷೆಯು ಲಯ, ಕಳಂಕ, ಕ್ಷಯಗಳಿಲ್ಲದ ಬಾಧ್ಯತೆಯಾಗಿದೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.


ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.


ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.


ನಿಮಗಾಗಿರುವ ನಮ್ಮ ನಿರೀಕ್ಷೆಯು ಸ್ಥಿರವಾಗಿದೆ. ಏಕೆಂದರೆ, ನಮ್ಮ ಕಷ್ಟಸಂಕಟಗಳಲ್ಲಿ ನೀವು ಪಾಲುಗಾರರಾಗಿದ್ದಂತೆಯೇ, ನಮ್ಮ ಸಂತೈಸುವಿಕೆಗಳಲ್ಲಿಯೂ ನೀವು ನಮ್ಮೊಂದಿಗೆ ಪಾಲುಗಾರರಾಗಿದ್ದೀರಿ ಎಂದು ನಮಗೆ ಗೊತ್ತಿದೆ.


ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


“ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.”


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


“ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


“ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಕ್ರಿಸ್ತ ಯೇಸುವಿನ ಸಂಕಟವು ನಮ್ಮಲ್ಲಿ ಹೇಗೆ ಅಧಿಕವಾಗಿದೆಯೋ ಹಾಗೆಯೇ, ಕ್ರಿಸ್ತ ಯೇಸುವಿನ ಮೂಲಕ ನಮ್ಮ ಸಂತೈಸುವಿಕೆಯೂ ನಮ್ಮಲ್ಲಿ ಅಧಿಕವಾಗಿರುತ್ತದೆ.


ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ.


ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.


ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು