Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:2 - ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾತ್ ರ್‍ಹಾವ್ನ್ ಅಮ್ಕಾ ಜಿವ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ಖಾಯ್ದ್ಯಾನ್, ಪಾಪಾಚ್ಯಾ ಅನಿ ಮರ್‍ನಾಚ್ಯಾ ಖಾಯ್ದ್ಯಾತ್ನಾ ಮಾಕಾ ಸ್ವತಂತ್ರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:2
29 ತಿಳಿವುಗಳ ಹೋಲಿಕೆ  

ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಕರ್ತದೇವರೇ ಆತ್ಮರಾಗಿದ್ದಾರೆ. “ಕರ್ತದೇವರ ಆತ್ಮವು ಎಲ್ಲಿರುತ್ತದೋ ಅಲ್ಲಿ ಸ್ವಾತಂತ್ರ್ಯವಿರುವುದು.”


ಪಾಪದಿಂದ ಬಿಡುಗಡೆಹೊಂದಿ ನೀತಿಗೆ ಗುಲಾಮರಾಗಿದ್ದೀರಿ.


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.


ಆದ್ದರಿಂದ ದೇವಪುತ್ರನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿ ನೀವು ಬಿಡುಗಡೆಯಾಗುವಿರಿ.


ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.


ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ.


ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.


ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.


ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.


“ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.


ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.


ಒಳ್ಳೆಯದನ್ನು ಮಾಡಲು ಬಯಸುತ್ತಿರುವ ನನ್ನಲ್ಲಿ ಕೆಟ್ಟದ್ದು ಇರುವ ನಿಯಮವನ್ನು ಕಾಣುತ್ತಿದ್ದೇನೆ.


ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ; ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಹಾಗಾದರೆ, ನಾವು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವೆಲ್ಲಿ? ಆಸ್ಪದವೇ ಇಲ್ಲ. ನೀತಿವಂತರೆಂಬ ನಿರ್ಣಯ ನಿಯಮದಿಂದಲೋ? ಕ್ರಿಯೆಗಳಿಂದಲೋ? ಇಲ್ಲ, ಅದು ಇಲ್ಲದೆ ಹೋಯಿತು. ಅದು ನಂಬಿಕೆಯ ನಿಯಮದಿಂದಲೇ.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮವು ಬಂದು, ಆ ಶವಗಳಲ್ಲಿ ಪ್ರವೇಶಿಸಲು, ಅವು ಕಾಲೂರಿ ನಿಂತವು. ಅವರನ್ನು ಕಂಡವರಿಗೆ ಮಹಾ ಭಯವುಂಟಾಯಿತು.


ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಕೆಲಸದವರಾಗಿರುವ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.


ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.


ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.


ಆ ಜೀವಿಗಳು ಮುಂದುವರಿಯುವಾಗ, ಚಕ್ರಗಳೂ ಮುಂದುವರಿಯುತ್ತಿದ್ದವು. ಅವು ನಿಂತು ಹೋಗುವಾಗ, ಇವೂ ನಿಂತು ಹೋಗುತ್ತಿದ್ದವು. ಅವು ನೆಲದಿಂದ ಮೇಲಕ್ಕೆ ಏಳುವಾಗ, ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಏಕೆಂದರೆ ಆ ಜೀವಿಗಳ ಆತ್ಮ ಚಕ್ರಗಳಲ್ಲಿಯೂ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು