Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:29 - ಕನ್ನಡ ಸಮಕಾಲಿಕ ಅನುವಾದ

29 ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜೆ ಕೊನಾಕ್ ದೆವಾನ್ ಎಚುನ್ ಕಾಡ್ಲ್ಯಾನಾಯ್ ತೆಂಕಾ ತೆನಿ ಅದ್ದಿಚ್ ಸೊಡ್ಸುಲ್ಯಾನಾಯ್ , ಅನಿ ಅಪ್ನಾಚ್ಯಾ ಲೆಕಾ ಸರ್ಕೊ ಹೊಯ್ ಸರ್ಕೆ ಕರ್‍ಲ್ಯಾನಾಯ್, ಅಶೆ ಲೆಕ್ ಸುಮಾರ್ ವಿಶ್ವಾಸಾತ್ ಹೊತ್ತ್ಯಾ ಲೊಕಾತ್ನಿ ಪಯ್ಲೆಚೊ ಹೊವ್ನ್ ರಾವ್ಚೆ ಮನ್ತಲಿ ತೆಚಿ ಆಶ್ಯಾ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:29
36 ತಿಳಿವುಗಳ ಹೋಲಿಕೆ  

“ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ಅವರು ಜಗದುತ್ಪತ್ತಿಗೆ ಮೊದಲೇ ನೇಮಕಗೊಂಡು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷರಾದರು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ನಾವು ಮಣ್ಣಿನ ಮನುಷ್ಯನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ, ಪರಲೋಕದ ಮನುಷ್ಯನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.


ದೇವರು ಯೆಹೂದ್ಯರೊಳಗಿಂದ ಮಾತ್ರವೇ ಕರೆಯದೆ, ಯೆಹೂದ್ಯರಲ್ಲದವರಿಂದಲೂ ಕರೆದು, ಮಹಿಮೆಗೆಂದು ಮೊದಲೇ ಸಿದ್ಧಮಾಡಿ, ತಮ್ಮ ಕರುಣೆಗೆ ಪಾತ್ರರಾದ ಜನರಿಗೆ ತಮ್ಮ ಮಹಿಮೆಯ ಐಶ್ವರ್ಯವನ್ನು ಪ್ರಕಟಿಸಲು ಇದನ್ನು ಮಾಡಿದರು.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.


ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.


ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ?


ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.


ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.


ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.


ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.


ಮೋಶೆಯು ಯೆಹೋವ ದೇವರಿಗೆ, “ ‘ಈ ಜನರನ್ನು ನಡೆಸಿಕೊಂಡು ಹೋಗು,’ ಎಂದು ನನಗೆ ಹೇಳುತ್ತಿರುವಿರಿ. ಯಾರನ್ನು ನನ್ನ ಸಂಗಡ ಕಳುಹಿಸುವಿರಿ, ಎಂದು ನೀವು ನನಗೆ ತಿಳಿಸಲಿಲ್ಲ. ಆದರೂ ನೀವು ನನಗೆ, ‘ನಾನು ನಿನ್ನನ್ನು ನಿನ್ನ ಹೆಸರಿನ ಮೂಲಕ ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆಯಿತು,’ ಎಂದೂ ಹೇಳಿದ್ದೀರಲ್ಲಾ.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ನೀವು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿಮ್ಮ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು,” ಎಂದರು.


ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.


ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ಇವರು ನಿಜವಾಗಿಯೂ ಸಮರ್ಪಿತರಾಗಬೇಕೆಂದು ನನ್ನನ್ನು ನಾನೇ ಇವರಿಗೋಸ್ಕರ ಸಮರ್ಪಿಸಿಕೊಳ್ಳುತ್ತೇನೆ.


ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ಆಗ ಯೇಸು ಅವರಿಗೆ, “ಭಯಪಡಬೇಡಿರಿ, ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ಹೋಗಿ ಅವರಿಗೆ ಹೇಳಿರಿ,” ಎಂದರು.


ಆದರೆ ದೇವರನ್ನು ಪ್ರೀತಿಸುವವರನ್ನು ದೇವರು ತಿಳಿದುಕೊಂಡಿರುತ್ತಾರೆ.


ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು