Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:3 - ಕನ್ನಡ ಸಮಕಾಲಿಕ ಅನುವಾದ

3 ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖಾಯ್ದ್ಯಾಕ್ ಜೆ ಕಾಯ್ ಕರುಕ್ ಹೊವ್ಕ್ ನಾ, ತೆ ದೆವಾನ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ಅಮ್ಚ್ಯಾ ಮಾನ್ಸಾಚ್ಯಾ ಸ್ವಬಾವಾಕ್ ಬಳ್ ಕಮಿ. ತೆನಿ ಅಪ್ನಾಚ್ಯಾ ಸ್ವತಾಚ್ಯಾ ಲೆಕಾಕ್ ಮಾನ್ಸಾಚ್ಯಾ ರುಪಾತ್ ಧಾಡುನ್ ದಿಲ್ಲ್ಯಾ ವೈನಾ ಪಾಪ್ ಚುಕಿದಾರ್ ಮನುನ್ ದಾಕ್ವುನ್ ದಿಲ್ಯಾನ್, ಪಾಪಾಕ್ ಧುರ್ ಕಾಡುನ್ ಟಾಕುಕ್ ತೊ ಅಮ್ಚೊ ಪಾಪಿ ಲೊಕಾಂಚೊ ಸ್ವಬಾವ್ ಘೆವ್ನ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:3
28 ತಿಳಿವುಗಳ ಹೋಲಿಕೆ  

ಮೋಶೆಯ ನಿಯಮದ ಮೂಲಕವಾಗಿ ನೀತಿವಂತರೆಂದು ನಿರ್ಣಯಿಸಲಾಗದ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ, ಯೇಸುವನ್ನು ನಂಬುವ ಪ್ರತಿಯೊಬ್ಬರೂ ಯೇಸುವಿನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರಾಗುವರು.


ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಏಕೆಂದರೆ ಕ್ರಿಸ್ತ ಯೇಸುವು ಒಂದೇ ಬಲಿ ಅರ್ಪಣೆಯಿಂದ ಪವಿತ್ರವಾಗುವವರನ್ನು ನಿರಂತರ ಪರಿಪೂರ್ಣರನ್ನಾಗಿ ಮಾಡಿದ್ದಾರೆ.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.


ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು.


ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


ತಮ್ಮನ್ನು ತಾವೇ ಬರಿದುಮಾಡಿಕೊಂಡು ಗುಲಾಮನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದರು.


ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು.


ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.


ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು, ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.


ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.


ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.


ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು