Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:30 - ಕನ್ನಡ ಸಮಕಾಲಿಕ ಅನುವಾದ

30 ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅಶೆ ಜೆ ಕೊನಾಕ್ ತೆನಿ ಯೆಗಳ್ಯಾನಾಯ್ ತೆಂಕಾ ತೆನಿ ಬಲ್ವುಲ್ಯಾನಾಯ್, ಅನಿ ಜೆ ಕೊನಾಕ್ ತೆನಿ ಬಲ್ವುಲ್ಯಾನಾಯ್ ತೆಂಕಾ ತೊ ನಿತಿವಂತ್ ಮನುನ್ ಎಚುನ್ ಕಾಡುನ್ ಘೆತಾ, ಅನಿ ತೆನಿ ಅಪ್ನಾಚಿ ಮಹಿಮಾ ತೆಂಚ್ಯಾ ವಾಂಗ್ಡಾ ವಾಟುನ್ ಘೆಟ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:30
42 ತಿಳಿವುಗಳ ಹೋಲಿಕೆ  

ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.


ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರುವಂತೆ ನೀವು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.


ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಇದು ನಂಬತಕ್ಕ ವಾಕ್ಯವಾಗಿದೆ: ನಾವು ಕ್ರಿಸ್ತ ಯೇಸುವಿನ ಜೊತೆಯಲ್ಲಿ ಸತ್ತಿದ್ದರೆ, ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಜೀವಿಸುವೆವು.


ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ನಿನ್ನನ್ನು ಭೂಮಿಯ ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ದೂರದ ಕೊನೆಯಿಂದ ಕರೆದು, ‘ನೀನು ನನ್ನ ಸೇವಕನು,’ ನಿನ್ನನ್ನು ನಾನು ಆಯ್ದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವುದಿಲ್ಲ.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ನಿಮಗೆ ಜೀವವಾಗಿರುವ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ, ನೀವು ಸಹ ಅವರೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.


ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,


ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ಕ್ರಿಸ್ತ ಯೇಸುವಿನೊಂದಿಗೆ ದೇವರು ನಮ್ಮನ್ನು ಎಬ್ಬಿಸಿ ಪರಲೋಕದ ಉನ್ನತ ಸ್ಥಳಗಳಲ್ಲಿ ಕ್ರಿಸ್ತನೊಂದಿಗೇ ನಮ್ಮನ್ನು ಕೂತುಕೊಳ್ಳುವಂತೆ ಮಾಡಿದ್ದಾರೆ.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಯೇಸು ಕ್ರಿಸ್ತನವರಾಗಲು ಕರೆಯಲಾದವರಲ್ಲಿ ಯೆಹೂದ್ಯರಲ್ಲದವರಲ್ಲಿ ನೀವೂ ಸಹ ಸೇರಿದ್ದೀರಿ.


ಈ ಸೃಷ್ಟಿಯು ಕೂಡ ನಾಶದ ಬಂಧನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ.


ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ.


ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.


ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,


ಈ ಪ್ರೇರಣೆಯು ನಿಮ್ಮನ್ನು ಕರೆದ ದೇವರಿಂದ ಬಂದದ್ದಲ್ಲ.


ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು