Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:36 - ಕನ್ನಡ ಸಮಕಾಲಿಕ ಅನುವಾದ

36 ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದರು. ಎಂಬದಾಗಿ ಬರೆದಿರುವಂತೆ ಆಗುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ನಿನಗೋಸ್ಕರವಾಗಿ ನಾವು ಎಲ್ಲಾ ಸಮಯಗಳಲ್ಲಿ ಸಾವಿನ ದವಡೆಯಲ್ಲಿದ್ದೇವೆ. ಕೊಯ್ಯಲು ಕೊಂಡೊಯ್ಯುವ ಕುರಿಗಳಿಗಿಂತ ಕಡೆಗಣಿಸಲ್ಪಟ್ಟಿದ್ದೇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಪವಿತ್ರ್ ಪುಸ್ತಕ್ ಮನ್ತಾ, “ತುಜೆಸಾಟ್ನಿ ಅಮಿ ಕನ್ನಾಬಿ ಮರ್‍ನಾಚ್ಯಾ ಅಪಾಯಾತ್ ಹಾಂವ್; ಅಮ್ಕಾ ಕಾತ್ರುನ್ ನ್ಹೆತಲ್ಯಾ ಬಕ್ರ್ಯಾ ಸರ್ಕೆ ಮನುನ್ ಘೆತ್ಯಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:36
18 ತಿಳಿವುಗಳ ಹೋಲಿಕೆ  

ಹೌದು, ನಿಮಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ. ವಧಿಸಲಿಕ್ಕಾಗಿರುವ ಕುರಿಗಳಂತೆ ಜನರು ನಮ್ಮನ್ನು ಎಣಿಸಿದ್ದಾರೆ.


ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.


ನಾವು ಸಹ ಪ್ರತಿ ಗಳಿಗೆಯಲ್ಲಿಯೂ ಅಪಾಯದಲ್ಲಿರುವುದೇಕೆ?


ಅಪೊಸ್ತಲರಾದ ನಮ್ಮನ್ನು ಮರಣದಂಡನೆ ಹೊಂದಿದವರಂತೆ ದೇವರು ಮೆರವಣಿಗೆಯ ಕಡೆಯವರನ್ನಾಗಿ ಮಾಡಿ ತೋರಿಸಿದ್ದಾರೆಂದು ನನಗನಿಸುತ್ತದೆ. ಏಕೆಂದರೆ, ದೇವರು ನಮ್ಮನ್ನು ದೇವದೂತರಿಗೂ ಮನುಷ್ಯರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವನ್ನಾಗಿ ಮಾಡಿದ್ದಾರೆ.


ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು: “ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು. ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು. ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. “ಮರವನ್ನು ಫಲ ಸಹಿತ ನಾಶ ಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, ಅವನ ಹೆಸರೇ ಇಲ್ಲದಂತಾಗಲಿ.”


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.


“ಕುರಿ, ಟಗರು, ಹೋತಗಳ ಹಾಗೆ ಅವರನ್ನು ವಧ್ಯಸ್ಥಾನಕ್ಕೆ ಬರಮಾಡುವೆನು. ಇದು ಯೆಹೋವನಾದ ನನ್ನ ನುಡಿ.


ಯೆಹೋವ ದೇವರೇ, ನೀವು ನನ್ನನ್ನು ತಿಳಿದಿದ್ದೀರಿ, ನನ್ನನ್ನು ನೋಡುತ್ತಾ ನಿಮ್ಮೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀರಿ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡಿರಿ.


ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.”


ಕಡಿಯತಕ್ಕ ಕುರಿಗಳಂತೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀರಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀರಿ.


ಸಹೋದರರೇ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನನಗೆ ನಿಮ್ಮ ಬಗ್ಗೆ ನಿಶ್ಚಯವಾಗಿರುವ ಹೆಮ್ಮೆಯಿಂದ ನಾನು ದಿನದಿನವು ಸಾಯುತ್ತಲಿದ್ದೇನೆ.


ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.


ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ.


ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು.


ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು