Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:16 - ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ದೇವರ ಆಯ್ಕೆಯು ಮನುಷ್ಯನ ಬಯಕೆ ಅಥವಾ ಪ್ರಯತ್ನದಿಂದಾಗಿರದೆ, ದೇವರ ಕರುಣೆಯಿಂದಲೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೇವರ ದಯೆ ದೊರಕುವುದು ಮಾನವನ ಇಚ್ಛೆಯಿಂದಲ್ಲ, ಅವನ ಪ್ರಯತ್ನದಿಂದಲೂ ಅಲ್ಲ. ಅದು ದೊರಕುವುದು ದೇವರ ಕರುಣೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ದೇವರ ದಯವು ಮನುಷ್ಯರಿಗೆ ಇಚ್ಫೈಸುವದರಿಂದಾಗಲಿ ಪ್ರಯತ್ನಿಸುವದರಿಂದಾಗಲಿ ದೊರೆಯದೆ ದೇವರು ಕರುಣಿಸುವದರಿಂದಲೇ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ದೇವರು ತಾನು ಯಾರಿಗೆ ಕರುಣೆ ತೋರಬಯಸುತ್ತಾನೊ ಅವನನ್ನೇ ಆರಿಸಿಕೊಳ್ಳುತ್ತಾನೆ. ಆತನ ಆಯ್ಕೆಯು ಜನರು ಏನು ಮಾಡಬಯಸುತ್ತಾರೆ ಅಥವಾ ಏನು ಮಾಡಲು ಪ್ರಯತ್ನಿಸುತ್ತಾರೆಂಬುದರ ಮೇಲೆ ಆಧಾರಗೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಶೆ ರ್‍ಹಾತಾನಾ ಸಗ್ಳೆ ಅಮ್ಕಾ ಮಾನ್ಸಾಕ್ನಿ ಕಶೆ ಪಾಜೆ ಅನಿ ಕರ್ತಾಂವ್ ಮನ್ತಲ್ಯಾ ವರ್‍ತಿ ಹೊಂದುನ್ ನಾ, ಖಾಲಿ ದೆವಾಚ್ಯಾ ದಯೆಚ್ಯಾ ವರ್‍ತಿ ಎವ್ಡೆಚ್ ಹೊಂದುನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:16
20 ತಿಳಿವುಗಳ ಹೋಲಿಕೆ  

ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ.


ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.


ಆ ಸಮಯದಲ್ಲಿ ಯೇಸು, ಪವಿತ್ರಾತ್ಮರ ಮುಖಾಂತರ ಆನಂದಗೊಂಡು, “ತಂದೆಯೇ, ಪರಲೋಕ, ಭೂಲೋಕಗಳ ಒಡೆಯರೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.


“ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ. ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ, ‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು.


ಗಾಳಿಯು ಅದರ ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಅದರಂತೆಯೇ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬರೂ ಹೀಗೇ ಇದ್ದಾರೆ,” ಎಂದು ಉತ್ತರಕೊಟ್ಟರು.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ,


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು