Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:19 - ಕನ್ನಡ ಸಮಕಾಲಿಕ ಅನುವಾದ

19 ಹಾಗಾದರೆ ನೀನು, “ದೇವರು ಇನ್ನೂ ತಪ್ಪು ಕಂಡುಹಿಡಿಯುವುದು ಏಕೆ? ದೇವರ ಸಂಕಲ್ಪವನ್ನು ಎದುರಿಸುವವರು ಯಾರು?” ಎಂದು ನೀನು ನನ್ನನ್ನು ಕೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಹಾಗಾದರೆ ದೇವರು ಹೇಗೆ ತಾನೆ ಮಾನವನನ್ನು ಅಪರಾಧಿ ಎಂದು ನಿರ್ಣಯಿಸಬಲ್ಲರು? ಅವರ ಚಿತ್ತವನ್ನು ವಿರೋಧಿಸಲು ಯಾರಿಗೆ ಸಾಧ್ಯ” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರ ಇಷ್ಟವನ್ನು ಎದುರಿಸುವವರು ಇಲ್ಲದಿರುವಲ್ಲಿ ಆತನು ತಪ್ಪುಹಿಡಿಯುವದು ಹೇಗೆ ಎಂದು ನನ್ನನ್ನು ಕೇಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾವು ಮಾಡುವ ಕಾರ್ಯಗಳು ದೇವರ ಹಿಡಿತಕ್ಕೆ ಒಳಗಾಗಿರುವುದಾದರೆ, ನಮ್ಮ ಪಾಪಗಳ ನಿಮಿತ್ತ ದೇವರು ನಮ್ಮನ್ನು ದೂಷಿಸುವುದೇಕೆ?” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ತುಮ್ಚ್ಯಾತ್ಲ್ಯಾ ಕೊನ್‍ಬಿ ಮಾಕಾ, “ ಹೆ ಸಗ್ಳೆ ಅಶೆ ಹಾಯ್ ಜಾಲ್ಯಾರ್ ಕೊನ್‍ಬಿ ಎಕ್ಲೊ ಚುಕೆತ್ ಹಾಯ್ ಮನುನ್ ದೆವ್ ಕಶೆ ಹುಡ್ಕುನ್ ಕಾಡ್ತಾ? ದೆವಾಚ್ಯಾ ಮನಾ ಸರ್ಕೆ ಹೊತಲ್ಯಾಕ್ ಕೊನ್ ಅಡ್ವುಕ್ ಹೊತಾ?” ಮನುನ್ ಮನಿಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:19
19 ತಿಳಿವುಗಳ ಹೋಲಿಕೆ  

ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?


“ಸತ್ತವರು ಎದ್ದೇಳುವುದು ಹೇಗೆ? ಎಂಥ ದೇಹದಿಂದ ಎದ್ದು ಬರುತ್ತಾರೆ?” ಎಂದು ಯಾರಾದರೂ ಕೇಳಬಹುದು.


ಆದರೆ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದಿರುತ್ತಾರೆಂದು ಸಾರುತ್ತಿರುವಲ್ಲಿ ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನ ಇಲ್ಲ ಎಂದು ಹೇಳುವುದು ಹೇಗೆ?


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೇ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಹೇಳಿದರು.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ! ನ್ಯಾಯದ ವಿಷಯದಲ್ಲಿ ವಾದಿಸಬೇಕಾದರೆ, ದೇವರಿಗೆ ಸವಾಲು ಹಾಕುವವರು ಯಾರು?


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ಯಾರಿಗಾದರೂ ಶೋಧನೆ ಬಂದಾಗ, “ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು,” ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ.


ಹಾಗಾದರೆ ನೀನು, “ನಾನು ಕಸಿಕಟ್ಟಿಸಿಕೊಳ್ಳಬೇಕೆಂದು ಆ ಕೊಂಬೆಗಳನ್ನು ಮುರಿದು ಹಾಕಲಾಯಿತು,” ಎಂದು ನೀನು ಹೇಳಬಹುದು.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು, ಕುಂಬಾರನು ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು! ಉಂಟುಮಾಡಿದವನಿಗೆ ಉಂಟುಮಾಡಿದ್ದು, “ನೀನು ನನ್ನನ್ನು ಉಂಟುಮಾಡಲಿಲ್ಲ,” ಎಂತಲೂ, ಮಡಕೆ ಕುಂಬಾರನಿಗೆ, “ನಿನಗೆ ಏನೂ ಗೊತ್ತಿಲ್ಲ,” ಎಂತಲೂ ಹೇಳಬಹುದೇ?


ಆದರೆ ಒಬ್ಬ ಮನುಷ್ಯನು, “ನಿನ್ನಲ್ಲಿ ನಂಬಿಕೆಯಿದೆ, ನನ್ನಲ್ಲಿ ಕ್ರಿಯೆಗಳಿವೆ,” ಎಂದು ವಾದಿಸಬಹುದು. ಅಂಥವನಿಗೆ, “ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ರುಜುಪಡಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ರುಜುಪಡಿಸುತ್ತೇನೆ,” ಎಂದು ಹೇಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು