Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:21 - ಕನ್ನಡ ಸಮಕಾಲಿಕ ಅನುವಾದ

21 ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಂದೇ ಮಣ್ಣಿನ ಮುದ್ದೆಯಿಂದ ಎರಡು ಕುಡಿಕೆಗಳನ್ನು ಅಂದರೆ ಒಂದನ್ನು ವಿಶೇಷ ಬಳಕೆಗೂ ಇನ್ನೊಂದನ್ನು ಸಾಮಾನ್ಯ ಬಳಕೆಗೂ ಮಾಡುವ ಅಧಿಕಾರ ಕುಂಬಾರನಿಗೆ ಇಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮುದ್ದೆಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕುಂಬಾರನು ತನಗೆ ಇಷ್ಟಬಂದಂತೆ ಒಂದೇ ಮಣ್ಣಿನಿಂದ ವಿವಿಧ ವಸ್ತುಗಳನ್ನು ತಯಾರಿಸುವುದಿಲ್ಲವೇ? ಅವನು ಒಂದನ್ನು ವಿಶೇಷವಾದ ಬಳಕೆಗಾಗಿಯೂ ಮತ್ತೊಂದನ್ನು ದೈನಂದಿನ ಬಳಕೆಗಾಗಿಯೂ ತಯಾರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಗಾಡ್ಗಿ ಕರ್‍ತಲ್ಯಾ ಕುಂಬಾರಾಕ್ ತೆನಿ ಕರ್‍ತಲೆ ಗಾಡ್ಗೆ ಅಪ್ನಾಚ್ಯಾ ಮನಾಕ್ ಯೆತಾ ತಸೆ ಕರ್‍ತಲೊ ಹಕ್ಕ್ ಹಾಯ್, ಅನಿ ದೊನ್ ಗಾಡ್ಗಿ ಎಕುಚ್ ಚಿಕ್ಲಾಚ್ಯಾ ಮುದ್ದ್ಯಾನ್, ಎಕ್ ಬರ್‍ಯಾ ಕಾಮಾಕ್ ವಾಪರ್ತಲೆ, ಅನಿ ಅನಿಎಕ್ ಸಾದಾರನ್ ಕಾಮಾಕ್ ವಾಪರ್ತಲೆ ಅಶೆ ದೊನ್ ಗಾಡ್ಗಿ ಕರ್‍ತಲೊಬಿ ಹಕ್ಕ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:21
13 ತಿಳಿವುಗಳ ಹೋಲಿಕೆ  

ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.


ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.


ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.


ಇಸ್ರಾಯೇಲನ್ನು ಕಬಳಿಸಲಾಗಿದೆ. ಅವರು ಜನಾಂಗಗಳಲ್ಲಿ ಬೇಡವಾದ ಪಾತ್ರೆಯ ಹಾಗೆ ಇದ್ದಾರೆ.


ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದುಹೋದ ಮಡಿಕೆಯೆ? ಮೆಚ್ಚುಗೆ ಇಲ್ಲದ ಪಾತ್ರೆಯೆ? ಏಕೆ ಕೊನ್ಯನೂ, ಅವನ ಸಂತಾನವೂ ಬೀದಿಪಾಲಾಗಿದ್ದಾರೆ, ತಮಗೆ ತಿಳಿಯದ ದೇಶಕ್ಕೆ ಗಡಿಪಾರಾಗಿದ್ದಾರೆ?


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


“ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?


ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು