Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:20 - ಕನ್ನಡ ಸಮಕಾಲಿಕ ಅನುವಾದ

20 ಸಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದಕಾರಣ, ಈ ಸಂಗತಿಗಳು ಈಡೇರುವ ದಿನದವರೆಗೆ ನೀನು ಮಾತನಾಡಲಾರದೆ ಮೂಕನಾಗಿರುವಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು. ಆದರೆ ನೀನು ಅದನ್ನು ನಂಬದೆಹೋದ ಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾಗದೆ ಮೂಕನಾಗಿರುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವದು; ಆದರೆ ನೀನು ಅದನ್ನು ನಂಬದೆಹೋದದ್ದರಿಂದ ಅದೆಲ್ಲಾ ಸಂಭವಿಸುವ ದಿನದವರೆಗೂ ಮಾತನಾಡಲಾರದೆ ಮೂಕನಾಗಿರುವಿ ಎಂದು ಅವನಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸಮಾ ಎಳಾಕ್ ಖರೆ ಹೊತಲ್ಯಾ, ಮಿಯಾ ಸಾಂಗಲ್ಲ್ಯಾ ಖಬ್ರೆರ್ ತಿಯಾ ವಿಶ್ವಾಸ್ ಕರುಕ್ನೆ, ಹೆಚೆಸಾಟ್ನಿ ಮಿಯಾ ಸಾಂಗಲ್ಲಿ ಗೊಸ್ಟ್ ಖರಿ ಹೊಯ್‍ ಪತರ್ ತುಕಾ ಬೊಲುಕ್ ಹೊಯ್ನಾ; ತಿಯಾ ಮುಕ್ಕೊ ಹೊವ್ನ್ ರ್‍ಹಾತೆ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:20
22 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನಿನ್ನ ನಾಲಿಗೆ ಸೇದಿ ಹೋಗುವಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವವನಾಗಲಾರೆ. ಅವರು ತಿರುಗಿಬೀಳುವ ಜನರಾಗಿದ್ದಾರೆ.


ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ, ಆಗ ನಾನೇ ಯೆಹೋವ ದೇವರೆಂದು ತಿಳಿಯುವರು.”


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು.


ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.


ನಾವು ಅಪನಂಬಿಗಸ್ತರಾಗಿದ್ದರೂ ಅವರು ನಂಬಿಗಸ್ತರಾಗಿಯೇ ಉಳಿದಿರುವರು. ಅವರು ತಮ್ಮ ಸ್ವಭಾವವನ್ನು ತಾವೇ ನಿರಾಕರಿಸಲಾರರು.


ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು.


ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.


ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”


ಆ ಅಧಿಕಾರಿ ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ, ಸಂಭವಿಸುವುದೋ?” ಎಂದು ನುಡಿದಿದ್ದನು. ಅದಕ್ಕವನು, “ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವೆ, ಆದರೆ ನೀನು ಅದನ್ನು ತಿನ್ನುವುದಿಲ್ಲ,” ಎಂದು ಪ್ರವಾದಿಯು ಹೇಳಿದ್ದನು.


ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.


ಆಗ ಯೆಹೋವ ದೇವರು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ, “ನನ್ನಲ್ಲಿ ವಿಶ್ವಾಸವಿಡದೆ ಹೋದಕಾರಣ ನೀವು ಇಸ್ರಾಯೇಲರ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧನಾಗಿ ಗೌರವಿಸುವುದಕ್ಕೆ, ನಾನು ಅವರಿಗೆ ಕೊಡುವ ದೇಶದಲ್ಲಿ ನೀವು ಅವರನ್ನು ಸೇರಿಸುವುದಿಲ್ಲ,” ಎಂದರು.


ಅದಕ್ಕೆ ಯೆಹೋವ ದೇವರು ಅವನಿಗೆ, “ಮನುಷ್ಯರಿಗೆ ಬಾಯಿ ಕೊಟ್ಟಾತನೂ ಯಾರು? ಮೂಕರನ್ನೂ ಕಿವುಡರನ್ನೂ ಮಾಡಿದಾತನೂ ಯಾರು? ದೃಷ್ಟಿಯುಳ್ಳವರನ್ನೂ ದೃಷ್ಟಿಯಿಲ್ಲದವರನ್ನೂ ಮಾಡಿದಾತನೂ ಯಾರು? ಯೆಹೋವ ದೇವರಾದ ನಾನೇ ಅಲ್ಲವೋ?


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರ ಅಪನಂಬಿಕೆಯು ದೇವರ ಪ್ರಾಮಾಣಿಕತೆಯನ್ನು ರದ್ದುಗೊಳಿಸುವುದೇ?


ಅವನು ನನಗೆ ಈ ಮಾತುಗಳನ್ನು ಹೇಳುತ್ತಿದ್ದಾಗ, ನಾನು ನನ್ನ ಮುಖವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.


ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ.


ಆಗ, ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.


ಕೂಡಲೇ ಜಕರೀಯನಿಗೆ ಮಾತು ಬಂತು, ಅವನ ನಾಲಿಗೆಯು ಸಡಿಲವಾಯಿತು, ಅವನು ಮಾತನಾಡಿ, ದೇವರನ್ನು ಕೊಂಡಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು