Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:28 - ಕನ್ನಡ ಸಮಕಾಲಿಕ ಅನುವಾದ

28 ಆ ದೇವದೂತನು ಆಕೆಗೆ, “ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದೇವದೂತನು ಆಕೆಯ ಬಳಿಗೆ ಬಂದು, “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆ ದೂತನು ಆಕೆಯ ಬಳಿಗೆ ಬಂದು - ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ದೆವಾಚೊ ದುತ್ ತಿಚೆಕ್ಡೆ ಯೆಲೊ ಅನಿ “ದೆವಾಚೆ ಸಮಾದಾನ್ ತುಜ್ಯಾ ವಾಂಗ್ಡಾ ರಾಂವ್ದಿತ್! ದೆವ್ ತುಜ್ಯಾ ವಾಂಗ್ಡಾ ಹಾಯ್ ಅನಿ ದೆವಾನ್ ತುಕಾ ಆಶಿರ್ವಾದ್ ದಿಲ್ಯಾನಾಯ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:28
17 ತಿಳಿವುಗಳ ಹೋಲಿಕೆ  

“ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.


ಆಗ ಯೆಹೋವ ದೇವರ ದೂತನು ಗಿದ್ಯೋನನಿಗೆ ಪ್ರತ್ಯಕ್ಷವಾಗಿ ಅವನಿಗೆ, “ಬಲಿಷ್ಠನಾದ ಪರಾಕ್ರಮಶಾಲಿಯೇ, ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.


ಆ ದೇವದೂತನು ಆಕೆಗೆ, “ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


ನಾನೇ ನಿನ್ನೊಂದಿಗಿದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ನಿನಗೆ ಕೇಡನ್ನುಂಟುಮಾಡುವುದಿಲ್ಲ. ಏಕೆಂದರೆ ನನಗಾಗಿ ಈ ಪಟ್ಟಣದಲ್ಲಿ ಅನೇಕ ಜನರಿದ್ದಾರೆ,” ಎಂದರು.


ಮಹಾಧ್ವನಿಯಿಂದ: “ಸ್ತ್ರೀಯರಲ್ಲಿ ನೀನು ಧನ್ಯಳೇ, ನಿನ್ನಲ್ಲಿ ಹುಟ್ಟುವ ಶಿಶುವೂ ಆಶೀರ್ವಾದ ಹೊಂದಿದ್ದು!


“ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳು ಆಶೀರ್ವಾದ ಹೊಂದಿದವಳು. ಗುಡಾರದಲ್ಲಿ ವಾಸಿಸುವ ಹೌದು, ಅವಳೇ ಸ್ತ್ರೀಯರೊಳಗೆ ಅಧಿಕ ಆಶೀರ್ವಾದ ಹೊಂದಿದವಳು.


ಅದಕ್ಕೆ ಯೇಸು ತಮಗೆ ಹೇಳಿದವನಿಗೆ ಉತ್ತರವಾಗಿ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ,


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ. ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು. ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.


ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ, “ಯೆಹೋವ ದೇವರು ನಿಮ್ಮ ಸಂಗಡ ಇರಲಿ,” ಎಂದನು. ಅದಕ್ಕೆ ಅವರು, “ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದರು.


ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು.


ಮರಿಯಳು ದೇವದೂತನ ಮಾತಿಗೆ ಬಹಳವಾಗಿ ಕಳವಳಗೊಂಡು, “ಇದು ಎಂಥಾ ಶುಭಾಶಯ?” ಎಂದು ತನ್ನ ಮನದಲ್ಲಿ ಯೋಚಿಸತೊಡಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು