Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:32 - ಕನ್ನಡ ಸಮಕಾಲಿಕ ಅನುವಾದ

32 ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆತನು ಮಹಾಪುರುಷನಾಗಿ ಪರಾತ್ಪರನ ಕುಮಾರನೆನಿಸಿಕೊಳ್ಳುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ಮೊಟೊ ಮಾನುಸ್ ಹೊತಾ, ಅನಿ ತೆಕಾ ಪರಮೊನ್ನತ್ ದೆವಾಚೊ ಲೆಕ್ ಮನುನ್ ಬಲ್ವುತ್ಯಾತ್.ಅನಿ ಸರ್ವೆಸ್ವರ್ ದೆವ್ ತೆಕಾ ತೆಚ್ಯಾ ಘರಾನ್ಯಾಚ್ಯಾ ದಾವಿದ್ ರಾಜಾ ಸರ್ಕೊ ರಾಜಾ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:32
39 ತಿಳಿವುಗಳ ಹೋಲಿಕೆ  

ಪ್ರೀತಿಯಲ್ಲಿ ಸಿಂಹಾಸನವು ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ, ದಾವೀದನ ಗುಡಾರದಲ್ಲಿ ಅದರ ಮೇಲೆ ನಂಬಿಗಸ್ತಿಕೆಯಲ್ಲಿ ಕೂತುಕೊಳ್ಳುವನು.


ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.


ಯೆಹೋವ ದೇವರು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾರೆ; ತಾವು ಹೀಗೆಂದು ಆಣೆಯಿಟ್ಟುಕೊಟ್ಟ ಮಾತನ್ನು ದೇವರು ಬದಲಿಸುವುದಿಲ್ಲ, “ನಿನ್ನ ಸಂತತಿಯವನನ್ನೇ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:


“ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ. ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಸತ್ತವರೊಳಗಿಂದ ಪುನರುತ್ಥಾನಗೊಂಡು ಪರಿಶುದ್ಧತೆಯ ಆತ್ಮದ ಪ್ರಕಾರ ದೇವಪುತ್ರರೆಂದು ಪ್ರಬಲವಾಗಿ ನಿರ್ಣಯಿಸಲಾದವರೂ ಆಗಿದ್ದಾರೆ. ಇವರೇ ನಮ್ಮ ಕರ್ತ ಯೇಸು ಕ್ರಿಸ್ತ.


ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು.


ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.


ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:


ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.


“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.


ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು.


ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ,” ಎಂದನು.


ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದರು. ತಿರುಗಿ ಮಹಾಯಾಜಕನು, “ನೀನು ಭಾಗ್ಯವಂತನ ದೇವರ ಪುತ್ರನಾಗಿರುವ ಕ್ರಿಸ್ತನೋ?” ಎಂದು ಯೇಸುವನ್ನು ಕೇಳಿದನು.


“ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:


“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


ಯೋಹಾನನು ಉತ್ತರವಾಗಿ ಅವರೆಲ್ಲರಿಗೆ: “ನಾನಂತೂ ನಿಮಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತ ಶಕ್ತರೊಬ್ಬರು ಬರುತ್ತಾರೆ, ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವ ಗುಲಾಮನಾಗಿರುವುದಕ್ಕೂ ನಾನು ಯೋಗ್ಯನಲ್ಲ. ಅವರು ಪವಿತ್ರಾತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ದೀಕ್ಷಾಸ್ನಾನ ಮಾಡಿಸುವರು.


ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.


ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.


ನಿಮ್ಮ ಮಕ್ಕಳು ನನ್ನ ಶಾಸನಗಳನ್ನೂ ನನ್ನ ಒಡಂಬಡಿಕೆಯನ್ನು ಸನ್ಮಾನಿಸಿ, ಕೈಗೊಂಡರೆ, ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನದಲ್ಲಿ ಕೂರುವರು.”


ದಾವೀದನ ಸಿಂಹಾಸನದ ಮೇಲೆ ಕೂರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು, ಯೆಹೂದದ ಮನುಷ್ಯರಾಗಿಯೂ, ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು, ಅವರೂ, ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು. ಈ ಪಟ್ಟಣದಲ್ಲಿ ಎಂದೆಂದಿಗೂ ವಾಸಮಾಡಿದರು.


‘ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಯೆಹೂದದ ಅರಸನೇ, ನೀನೂ, ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಸಹಿತವಾಗಿ ಯೆಹೋವ ದೇವರ ವಾಕ್ಯವನ್ನು ಕೇಳಿರಿ.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು